ಸುಳ್ಯ: ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅಗ್ನಿ ಶಮನ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳದ ಕೆ.ಎಂ ಅಬ್ರಾಹಂ ಅಗ್ನಿ ಅನಾಹುತದ ಸಂದರ್ಭದಲ್ಲಿ ಅಗ್ನಿ ಶಮನಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು. ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ವಿಶ್ವನಾಥ ಪೂಜಾರಿ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೊತ್ತಮ ಕೆ.ಜಿ, ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕ ಜೀತೇಂದ್ರ ಎನ್.ಎ, ಪ್ರಭಾಕರನ್ ನಾಯರ್, ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ, ರೋಟರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಕೆ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿ ನಾಯಕ ಚಿಂತನ್ ಸ್ವಾಗತಿಸಿ, ಇಂಟರಾಕ್ಟ್ ಕ್ಲಬ್ ನಾಯಕಿ ಶರಣ್ಯ ಬೇರಿಕೆ ವಂದಿಸಿದರು. ಚಿತ್ಕಲ ಭಾರಾಧ್ವಜ್ ಪ್ರಾರ್ಥಿಸಿದರು, ಶಮಾ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಕೆ.ವಿಶ್ವನಾಥ ಪೂಜಾರಿ ನೇತೃತ್ವದಲ್ಲಿ ಅಗ್ನಿ ಶಮನದ ಪ್ರಾತ್ಯಕ್ಷಿತೆ ನಡೆಸಲಾಯಿತು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…