ಸುಳ್ಯ: ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅಗ್ನಿ ಶಮನ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳದ ಕೆ.ಎಂ ಅಬ್ರಾಹಂ ಅಗ್ನಿ ಅನಾಹುತದ ಸಂದರ್ಭದಲ್ಲಿ ಅಗ್ನಿ ಶಮನಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು. ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ವಿಶ್ವನಾಥ ಪೂಜಾರಿ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೊತ್ತಮ ಕೆ.ಜಿ, ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕ ಜೀತೇಂದ್ರ ಎನ್.ಎ, ಪ್ರಭಾಕರನ್ ನಾಯರ್, ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ, ರೋಟರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಕೆ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿ ನಾಯಕ ಚಿಂತನ್ ಸ್ವಾಗತಿಸಿ, ಇಂಟರಾಕ್ಟ್ ಕ್ಲಬ್ ನಾಯಕಿ ಶರಣ್ಯ ಬೇರಿಕೆ ವಂದಿಸಿದರು. ಚಿತ್ಕಲ ಭಾರಾಧ್ವಜ್ ಪ್ರಾರ್ಥಿಸಿದರು, ಶಮಾ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಕೆ.ವಿಶ್ವನಾಥ ಪೂಜಾರಿ ನೇತೃತ್ವದಲ್ಲಿ ಅಗ್ನಿ ಶಮನದ ಪ್ರಾತ್ಯಕ್ಷಿತೆ ನಡೆಸಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…