ಸುಳ್ಯ: ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅಗ್ನಿ ಶಮನ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳದ ಕೆ.ಎಂ ಅಬ್ರಾಹಂ ಅಗ್ನಿ ಅನಾಹುತದ ಸಂದರ್ಭದಲ್ಲಿ ಅಗ್ನಿ ಶಮನಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು. ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ವಿಶ್ವನಾಥ ಪೂಜಾರಿ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೊತ್ತಮ ಕೆ.ಜಿ, ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕ ಜೀತೇಂದ್ರ ಎನ್.ಎ, ಪ್ರಭಾಕರನ್ ನಾಯರ್, ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ, ರೋಟರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಕೆ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿ ನಾಯಕ ಚಿಂತನ್ ಸ್ವಾಗತಿಸಿ, ಇಂಟರಾಕ್ಟ್ ಕ್ಲಬ್ ನಾಯಕಿ ಶರಣ್ಯ ಬೇರಿಕೆ ವಂದಿಸಿದರು. ಚಿತ್ಕಲ ಭಾರಾಧ್ವಜ್ ಪ್ರಾರ್ಥಿಸಿದರು, ಶಮಾ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಕೆ.ವಿಶ್ವನಾಥ ಪೂಜಾರಿ ನೇತೃತ್ವದಲ್ಲಿ ಅಗ್ನಿ ಶಮನದ ಪ್ರಾತ್ಯಕ್ಷಿತೆ ನಡೆಸಲಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…