Advertisement
ಸುದ್ದಿಗಳು

ರೋಟರಿ ಮಿಸ್ಟಿ ಹಿಲ್ಸ್ ನಿಂದ 7ನೇ ವರ್ಷದ ಆಯೋಜನೆ – ನಾಡಹಬ್ಬದಲ್ಲಿ ಮಕ್ಕಳಿಗೂ ಸಂಭ್ರಮಿಸಲು ಅವಕಾಶ -ನಾಳೆ ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ

Share

ಮಡಿಕೇರಿ: ಮಡಿಕೇರಿ ದಸರಾ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಮಕ್ಕಳ ದಸರಾ ನಾಳೆ (ಬುಧವಾರ) ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಕ್ಕಳ ದಸರಾ ಪ್ರಯುಕ್ತ ಏರ್ಪಡಿಸಲಾಗಿರುವ ವಿವಿಧ ಸ್ಪರ್ಧೆಗಳಿಗೆ ಮಕ್ಕಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿ ಪಾಲ್ಗೊಳ್ಳಬಹುದಾಗಿದೆ.

ಮಕ್ಕಳ ದಸರಾವನ್ನು ನಗರ ದಸರಾ ಸಮಿತಿ ಸಹಯೋಗದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಅ.2 ರಂದು ಗಾಂಧಿ ಮೈದಾನದಲ್ಲಿ ಆಯೋಜಿಸಿದೆ. ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳ ಮಂಟಪ, ಕ್ಲೇಮಾಡೆಲಿಂಗ್, ಸೈನ್ಸ್ ಮಾಡೆಲ್ , ಛದ್ನವೇಶ ಸ್ಪರ್ಧೆಗಳು ವಿವಿಧ ವಿಭಾಗಗಳಲ್ಲಿ ಜರುಗಲಿದೆ. ಬೆಳಗ್ಗೆ 9.30 ರಿಂದಲೇ ಸ್ಪರ್ಧೆಗಳು ಪ್ರಾರಂಭವಾಗಲಿದೆ.

ಮಕ್ಕಳ ದಸರಾವನ್ನು ಜಿಲ್ಲಾಧಿಕಾರಿ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಅನೀಸ್ ಕಣ್ಣಣಿ ಜಾಯ್ ಉದ್ಘಾಟಿಸಲಿದ್ದಾರೆ. ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್.ಬಿ. ರವಿ, ರೋಟರಿ ವಲಯ 6 ರ ಸಹಾಯಕ ಗವರ್ನರ್ ಪಿ. ನಾಗೇಶ್ , ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಎಂ.ಆರ್. ಜಗದೀಶ್, ಕಾರ್ಯದರ್ಶಿ ಪ್ರಮೋದ್ ಕುಮಾರ್ ರೈ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ದಸರಾವನ್ನು ಮಡಿಕೇರಿಯ ದಸರಾ ಸಂದರ್ಭ ರೋಟರಿ ಮಿಸ್ಟಿ ಹಿಲ್ಸ್ 7 ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳು ಪಾಲ್ಗೊಳ್ಳುವ ಮೂಲಕ ದಸರಾದಲ್ಲಿ ಮಕ್ಕಳೂ ಪಾಲ್ಗೊಳ್ಳುವಂತಾಗಿದೆ. ಬುಧವಾರ ಸಂಜೆ ಸಾಂಸ್ಕೃತಿಕ ಸಮಿತಿ ವತಿಯಿಂದ ಮಕ್ಕಳಿಗೆ ಆದ್ಯತೆ ನೀಡಲಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿತವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

17 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago