Advertisement
ಸುದ್ದಿಗಳು

ರೋಟರಿ ಮಿಸ್ಟಿ ಹಿಲ್ಸ್ ನಿಂದ 7ನೇ ವರ್ಷದ ಆಯೋಜನೆ – ನಾಡಹಬ್ಬದಲ್ಲಿ ಮಕ್ಕಳಿಗೂ ಸಂಭ್ರಮಿಸಲು ಅವಕಾಶ -ನಾಳೆ ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ

Share

ಮಡಿಕೇರಿ: ಮಡಿಕೇರಿ ದಸರಾ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಮಕ್ಕಳ ದಸರಾ ನಾಳೆ (ಬುಧವಾರ) ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಕ್ಕಳ ದಸರಾ ಪ್ರಯುಕ್ತ ಏರ್ಪಡಿಸಲಾಗಿರುವ ವಿವಿಧ ಸ್ಪರ್ಧೆಗಳಿಗೆ ಮಕ್ಕಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿ ಪಾಲ್ಗೊಳ್ಳಬಹುದಾಗಿದೆ.

ಮಕ್ಕಳ ದಸರಾವನ್ನು ನಗರ ದಸರಾ ಸಮಿತಿ ಸಹಯೋಗದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಅ.2 ರಂದು ಗಾಂಧಿ ಮೈದಾನದಲ್ಲಿ ಆಯೋಜಿಸಿದೆ. ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳ ಮಂಟಪ, ಕ್ಲೇಮಾಡೆಲಿಂಗ್, ಸೈನ್ಸ್ ಮಾಡೆಲ್ , ಛದ್ನವೇಶ ಸ್ಪರ್ಧೆಗಳು ವಿವಿಧ ವಿಭಾಗಗಳಲ್ಲಿ ಜರುಗಲಿದೆ. ಬೆಳಗ್ಗೆ 9.30 ರಿಂದಲೇ ಸ್ಪರ್ಧೆಗಳು ಪ್ರಾರಂಭವಾಗಲಿದೆ.

ಮಕ್ಕಳ ದಸರಾವನ್ನು ಜಿಲ್ಲಾಧಿಕಾರಿ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಅನೀಸ್ ಕಣ್ಣಣಿ ಜಾಯ್ ಉದ್ಘಾಟಿಸಲಿದ್ದಾರೆ. ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್.ಬಿ. ರವಿ, ರೋಟರಿ ವಲಯ 6 ರ ಸಹಾಯಕ ಗವರ್ನರ್ ಪಿ. ನಾಗೇಶ್ , ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಎಂ.ಆರ್. ಜಗದೀಶ್, ಕಾರ್ಯದರ್ಶಿ ಪ್ರಮೋದ್ ಕುಮಾರ್ ರೈ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ದಸರಾವನ್ನು ಮಡಿಕೇರಿಯ ದಸರಾ ಸಂದರ್ಭ ರೋಟರಿ ಮಿಸ್ಟಿ ಹಿಲ್ಸ್ 7 ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳು ಪಾಲ್ಗೊಳ್ಳುವ ಮೂಲಕ ದಸರಾದಲ್ಲಿ ಮಕ್ಕಳೂ ಪಾಲ್ಗೊಳ್ಳುವಂತಾಗಿದೆ. ಬುಧವಾರ ಸಂಜೆ ಸಾಂಸ್ಕೃತಿಕ ಸಮಿತಿ ವತಿಯಿಂದ ಮಕ್ಕಳಿಗೆ ಆದ್ಯತೆ ನೀಡಲಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿತವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

23 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago