Advertisement
ಸುದ್ದಿಗಳು

ರೋಟರಿ ಮಿಸ್ಟಿ ಹಿಲ್ಸ್ ನಿಂದ 7ನೇ ವರ್ಷದ ಆಯೋಜನೆ – ನಾಡಹಬ್ಬದಲ್ಲಿ ಮಕ್ಕಳಿಗೂ ಸಂಭ್ರಮಿಸಲು ಅವಕಾಶ -ನಾಳೆ ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ

Share

ಮಡಿಕೇರಿ: ಮಡಿಕೇರಿ ದಸರಾ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಮಕ್ಕಳ ದಸರಾ ನಾಳೆ (ಬುಧವಾರ) ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಕ್ಕಳ ದಸರಾ ಪ್ರಯುಕ್ತ ಏರ್ಪಡಿಸಲಾಗಿರುವ ವಿವಿಧ ಸ್ಪರ್ಧೆಗಳಿಗೆ ಮಕ್ಕಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿ ಪಾಲ್ಗೊಳ್ಳಬಹುದಾಗಿದೆ.

ಮಕ್ಕಳ ದಸರಾವನ್ನು ನಗರ ದಸರಾ ಸಮಿತಿ ಸಹಯೋಗದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಅ.2 ರಂದು ಗಾಂಧಿ ಮೈದಾನದಲ್ಲಿ ಆಯೋಜಿಸಿದೆ. ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳ ಮಂಟಪ, ಕ್ಲೇಮಾಡೆಲಿಂಗ್, ಸೈನ್ಸ್ ಮಾಡೆಲ್ , ಛದ್ನವೇಶ ಸ್ಪರ್ಧೆಗಳು ವಿವಿಧ ವಿಭಾಗಗಳಲ್ಲಿ ಜರುಗಲಿದೆ. ಬೆಳಗ್ಗೆ 9.30 ರಿಂದಲೇ ಸ್ಪರ್ಧೆಗಳು ಪ್ರಾರಂಭವಾಗಲಿದೆ.

ಮಕ್ಕಳ ದಸರಾವನ್ನು ಜಿಲ್ಲಾಧಿಕಾರಿ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಅನೀಸ್ ಕಣ್ಣಣಿ ಜಾಯ್ ಉದ್ಘಾಟಿಸಲಿದ್ದಾರೆ. ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್.ಬಿ. ರವಿ, ರೋಟರಿ ವಲಯ 6 ರ ಸಹಾಯಕ ಗವರ್ನರ್ ಪಿ. ನಾಗೇಶ್ , ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಎಂ.ಆರ್. ಜಗದೀಶ್, ಕಾರ್ಯದರ್ಶಿ ಪ್ರಮೋದ್ ಕುಮಾರ್ ರೈ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ದಸರಾವನ್ನು ಮಡಿಕೇರಿಯ ದಸರಾ ಸಂದರ್ಭ ರೋಟರಿ ಮಿಸ್ಟಿ ಹಿಲ್ಸ್ 7 ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳು ಪಾಲ್ಗೊಳ್ಳುವ ಮೂಲಕ ದಸರಾದಲ್ಲಿ ಮಕ್ಕಳೂ ಪಾಲ್ಗೊಳ್ಳುವಂತಾಗಿದೆ. ಬುಧವಾರ ಸಂಜೆ ಸಾಂಸ್ಕೃತಿಕ ಸಮಿತಿ ವತಿಯಿಂದ ಮಕ್ಕಳಿಗೆ ಆದ್ಯತೆ ನೀಡಲಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿತವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

15 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

22 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago