ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…