ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…