ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…