Advertisement
ಸುದ್ದಿಗಳು

ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆ

Share

ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್  ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

5 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

6 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

7 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

10 hours ago