ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.
ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…