ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.
ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…