Advertisement
ಸುದ್ದಿಗಳು

ರೋಟಾ ವೈರಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

Share

ಮಡಿಕೇರಿ :ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗದಲ್ಲಿ ರೋಟಾ ವೈರಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್ ಅವರು ಮಗುವಿಗೆ ರೋಟಾ ವೈರಸ್ ಲಸಿಕೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಮಕ್ಕಳಲ್ಲಿ ರೋಟಾ ವೈರಸ್ ಬೇಧಿ(ಅತೀಸಾರ ಬೇಧಿ) ನಿಯಂತ್ರಣಕ್ಕಾಗಿ ರೋಟಾ ವೈರಸ್ ಲಸಿಕೆ ನೀಡಲಾಗುತ್ತಿದೆ. ರೋಟಾ ವೈರಸ್ ಒಂದು ಅತಿ ಹೆಚ್ಚು ಹರಡಬಲ್ಲ ವೈರಾಣು, ಇದು ಮಕ್ಕಳಲ್ಲಿ ಬೇಧಿಯಾಗಲು ಅತಿ ದೊಡ್ಡ ಕಾರಣವಾಗಿದೆ. ಇದರಿಂದಾಗಿ ಮಕ್ಕಳು ಸಾವಿಗೀಡಾಗಬಹುದು. ರೋಟಾ ವೈರಸ್ ಸೋಂಕಿನ ಆರಂಭ ಕಡಿಮೆ ಪ್ರಮಾಣದ ಭೇಧಿಯಿಂದ ಆಗುತ್ತದೆ. ಮುಂದೆ ಅದು ಗಂಭೀರ ಸ್ವರೂಪಕ್ಕೆ ತಿರುಗಬಹುದು ಆದ್ದರಿಂದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು.

ಸೂಕ್ಷ್ಮ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಶರೀರದಲ್ಲಿ ನೀರು ಮತ್ತು ಲವಣಾಂಶದ ಕೊರತೆ ಉಂಟಾಗಬಹುದು. ಹಾಗೂ ಕೆಲವು ಸಂದರ್ಭಗಳಲ್ಲಿ ಮಕ್ಕಳು ಸಾವಿಗೀಡಾಗಬಹುದು. ಆದ್ದರಿಂದ ಸಾರ್ವಜನಿಕ ಲಸಿಕಾ ಕಾರ್ಯಕ್ರಮಕ್ಕೆ ಈ ಲಸಿಕೆಯನ್ನು ಹೊಸದಾಗಿ ಸೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ ಮೋಹನ್ ಅವರು ತಿಳಿಸಿದರು.

ಲಸಿಕೆಯನ್ನು 6 ನೇ ವಾರದ ಮಕ್ಕಳಿಗೆ ಒಪಿವಿ, ಆರ್‍ವಿವಿ, ಐಪಿವಿ, ಪೆಂಟಾವೆಲೆಂಟ್, 10 ನೇ ವಾರದ ಮಕ್ಕಳಿಗೆ ಓಪಿವಿ, ಆರ್‍ವಿವಿ, ಪೆಂಟಾವೆಲೆಂಟ್. 14ನೇ ವಾರದ ಮಕ್ಕಳಿಗೆ ಒಪಿವಿ, ಆರ್‍ವಿವಿ, ಐಪಿವಿ, ಪೆಂಟಾವೆಲೆಂಟ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ಮಾಹಿತಿ:-ರೋಟಾ ವೈರಸ್ ಲಸಿಕೆ ನೀಡಿಕೆ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದ್ದು ವೈದ್ಯರು ಮಕ್ಕಳಿಗೆ ರೋಟಾ ವೈರಸ್ ಲಸಿಕೆ ಹಾಕಿರುವುದನ್ನು ಮತ್ತು ಅವರು ಸಂಪೂರ್ಣವಾಗಿ ಸುರಕ್ಷಿತರಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಿ.

ಲಸಿಕೆ:-ರೋಟಾ ವೈರಸ್ ಲಸಿಕೆಯನ್ನು 6, 10, 14 ವಾರಗಳ ವಯೋಮಾನದಲ್ಲಿ ಹಾಕಿಸಬೇಕು. ಲಸಿಕೆಯೊಂದಿಗೆ ನೀಡಲಾಗಿರುವ ಸರಿಂಜ್‍ನಲ್ಲಿ 2.5 ಎಂ.ಎಲ್ ಲಸಿಕೆಯನ್ನು ಬಾಯಿಯ ಮೂಲಕ ಮಗುವಿಗೆ ಪ್ರತಿ ವರಸೆಯಲ್ಲಿ ಕೊಡಿಸಬೇಕು. ಮುಂದಿನ ಬಾರಿಗೆ ಲಸಿಕೆ ಹಾಕಿಸುವ ದಿನಾಂಕ ಮತ್ತು ಸ್ಥಳಗಳ ಕುರಿತು ಪೋಷಕರು ಮಾಹಿತಿ ತಿಳಿದುಕೊಂಡು ಲಸಿಕೆ ಹಾಕಿಸುವುದಕ್ಕೆ ಬರುವಾಗ ತಾಯಿ ಕಾರ್ಡ್ ತರಬೇಕು. ಲಸಿಕೆ ಹಾಕಿಸಿದ ನಂತರ ಒಂದು ವೇಳೆ ಮಗುವಿಗೆ ಜ್ವರ, ವಾಂತಿ ಆದರೆ ಅಥವಾ ಮಗು ಸತತವಾಗಿ ಅಳುತ್ತಿದ್ದರೆ, ಮಗುವುನ ಹೊಟ್ಟೆ ಊದಿಕೊಂಡಿದ್ದರೆ, ಹೊಟ್ಟೆ ನೋವಿದ್ದರೆ ತಕ್ಷಣವೇ ಹತ್ತಿರದ ಆರೋಗ್ಯ ಕೇಂದ್ರದ ವೈದ್ಯರು ಅಥವಾ ಜಿಲ್ಲಾ ಆಸ್ಪತ್ರೆಯ ವೈದ್ಯರಿಗೆ ತಕ್ಷಣ ತೋರಿಸಬೇಕು.

ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ಆನಂದ್, ಜಿಲ್ಲಾ ಸರ್ವೆಕ್ಷಣಾಧೀಕಾರಿ ಡಾ ಶಿವಕುಮಾರ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ.ಶಿವಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

4 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

5 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

13 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

22 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago