Advertisement
ಸುದ್ದಿಗಳು

ರೋಟಾ ವೈರಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

Share

ಮಡಿಕೇರಿ :ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗದಲ್ಲಿ ರೋಟಾ ವೈರಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್ ಅವರು ಮಗುವಿಗೆ ರೋಟಾ ವೈರಸ್ ಲಸಿಕೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಮಕ್ಕಳಲ್ಲಿ ರೋಟಾ ವೈರಸ್ ಬೇಧಿ(ಅತೀಸಾರ ಬೇಧಿ) ನಿಯಂತ್ರಣಕ್ಕಾಗಿ ರೋಟಾ ವೈರಸ್ ಲಸಿಕೆ ನೀಡಲಾಗುತ್ತಿದೆ. ರೋಟಾ ವೈರಸ್ ಒಂದು ಅತಿ ಹೆಚ್ಚು ಹರಡಬಲ್ಲ ವೈರಾಣು, ಇದು ಮಕ್ಕಳಲ್ಲಿ ಬೇಧಿಯಾಗಲು ಅತಿ ದೊಡ್ಡ ಕಾರಣವಾಗಿದೆ. ಇದರಿಂದಾಗಿ ಮಕ್ಕಳು ಸಾವಿಗೀಡಾಗಬಹುದು. ರೋಟಾ ವೈರಸ್ ಸೋಂಕಿನ ಆರಂಭ ಕಡಿಮೆ ಪ್ರಮಾಣದ ಭೇಧಿಯಿಂದ ಆಗುತ್ತದೆ. ಮುಂದೆ ಅದು ಗಂಭೀರ ಸ್ವರೂಪಕ್ಕೆ ತಿರುಗಬಹುದು ಆದ್ದರಿಂದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು.

ಸೂಕ್ಷ್ಮ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಶರೀರದಲ್ಲಿ ನೀರು ಮತ್ತು ಲವಣಾಂಶದ ಕೊರತೆ ಉಂಟಾಗಬಹುದು. ಹಾಗೂ ಕೆಲವು ಸಂದರ್ಭಗಳಲ್ಲಿ ಮಕ್ಕಳು ಸಾವಿಗೀಡಾಗಬಹುದು. ಆದ್ದರಿಂದ ಸಾರ್ವಜನಿಕ ಲಸಿಕಾ ಕಾರ್ಯಕ್ರಮಕ್ಕೆ ಈ ಲಸಿಕೆಯನ್ನು ಹೊಸದಾಗಿ ಸೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ ಮೋಹನ್ ಅವರು ತಿಳಿಸಿದರು.

ಲಸಿಕೆಯನ್ನು 6 ನೇ ವಾರದ ಮಕ್ಕಳಿಗೆ ಒಪಿವಿ, ಆರ್‍ವಿವಿ, ಐಪಿವಿ, ಪೆಂಟಾವೆಲೆಂಟ್, 10 ನೇ ವಾರದ ಮಕ್ಕಳಿಗೆ ಓಪಿವಿ, ಆರ್‍ವಿವಿ, ಪೆಂಟಾವೆಲೆಂಟ್. 14ನೇ ವಾರದ ಮಕ್ಕಳಿಗೆ ಒಪಿವಿ, ಆರ್‍ವಿವಿ, ಐಪಿವಿ, ಪೆಂಟಾವೆಲೆಂಟ್ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ಮಾಹಿತಿ:-ರೋಟಾ ವೈರಸ್ ಲಸಿಕೆ ನೀಡಿಕೆ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದ್ದು ವೈದ್ಯರು ಮಕ್ಕಳಿಗೆ ರೋಟಾ ವೈರಸ್ ಲಸಿಕೆ ಹಾಕಿರುವುದನ್ನು ಮತ್ತು ಅವರು ಸಂಪೂರ್ಣವಾಗಿ ಸುರಕ್ಷಿತರಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಿ.

ಲಸಿಕೆ:-ರೋಟಾ ವೈರಸ್ ಲಸಿಕೆಯನ್ನು 6, 10, 14 ವಾರಗಳ ವಯೋಮಾನದಲ್ಲಿ ಹಾಕಿಸಬೇಕು. ಲಸಿಕೆಯೊಂದಿಗೆ ನೀಡಲಾಗಿರುವ ಸರಿಂಜ್‍ನಲ್ಲಿ 2.5 ಎಂ.ಎಲ್ ಲಸಿಕೆಯನ್ನು ಬಾಯಿಯ ಮೂಲಕ ಮಗುವಿಗೆ ಪ್ರತಿ ವರಸೆಯಲ್ಲಿ ಕೊಡಿಸಬೇಕು. ಮುಂದಿನ ಬಾರಿಗೆ ಲಸಿಕೆ ಹಾಕಿಸುವ ದಿನಾಂಕ ಮತ್ತು ಸ್ಥಳಗಳ ಕುರಿತು ಪೋಷಕರು ಮಾಹಿತಿ ತಿಳಿದುಕೊಂಡು ಲಸಿಕೆ ಹಾಕಿಸುವುದಕ್ಕೆ ಬರುವಾಗ ತಾಯಿ ಕಾರ್ಡ್ ತರಬೇಕು. ಲಸಿಕೆ ಹಾಕಿಸಿದ ನಂತರ ಒಂದು ವೇಳೆ ಮಗುವಿಗೆ ಜ್ವರ, ವಾಂತಿ ಆದರೆ ಅಥವಾ ಮಗು ಸತತವಾಗಿ ಅಳುತ್ತಿದ್ದರೆ, ಮಗುವುನ ಹೊಟ್ಟೆ ಊದಿಕೊಂಡಿದ್ದರೆ, ಹೊಟ್ಟೆ ನೋವಿದ್ದರೆ ತಕ್ಷಣವೇ ಹತ್ತಿರದ ಆರೋಗ್ಯ ಕೇಂದ್ರದ ವೈದ್ಯರು ಅಥವಾ ಜಿಲ್ಲಾ ಆಸ್ಪತ್ರೆಯ ವೈದ್ಯರಿಗೆ ತಕ್ಷಣ ತೋರಿಸಬೇಕು.

ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ಆನಂದ್, ಜಿಲ್ಲಾ ಸರ್ವೆಕ್ಷಣಾಧೀಕಾರಿ ಡಾ ಶಿವಕುಮಾರ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ.ಶಿವಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

3 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

11 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

18 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

19 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

20 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago