Advertisement
ರಾಷ್ಟ್ರೀಯ

ರೋಹಿತ್, ರಾಹುಲ್ ಭರ್ಜರಿ ಶತಕ- ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಜಯ

Share

ಲೀಡ್ಸ್​: ಆರಂಭಿಕ ಆಟಗಾರರಾದ ಕೆ.ಎಲ್​​ ರಾಹುಲ್​​​ (111) ಹಾಗೂ ರೋಹಿತ್​​ ಶರ್ಮ (103) ಅವರ ಸ್ಫೋಟಕ ಶತಕಗಳ ನೆರವಿನಿಂದ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಎದುರು 7 ವಿಕೆಟ್​​​​​​ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ಹೇಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​​ ಮಾಡಿದ ಲಂಕಾ 50 ಓವರ್​ಗಳಲ್ಲಿ 7 ವಿಕೆಟ್​​ ನಷ್ಟಕ್ಕೆ 264 ರನ್​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 43.3 ​ಗಳಲ್ಲಿ 3 ವಿಕೆಟ್​​ ನಷ್ಟಕ್ಕೆ 265 ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ರಾಹುಲ್​​ 111, ರೋಹಿತ್​​​ 103, ನಾಯಕ ವಿರಾಟ್​​ ಕೊಹ್ಲಿ 34* ಉತ್ತಮ ಆಟವಾಡಿದರೆ, ರಿಷಬ್​​​ ಪಂತ್​ 4 ಮತ್ತು ಹಾರ್ದಿಕ್​​ ಪಾಂಡ್ಯ 7* ರನ್ ಗಳಿಸಿದರು.
ಶ್ರೀಲಂಕಾ ಪರ ಲಸಿತ್​​ ಮಲಿಂಗಾ, ಕುಸಾನ್​​ ರಜಿತಾ ಹಾಗೂ ಇಸ್ರು ಉಡಾನ ತಲಾ ಒಂದು ವಿಕೆಟ್​​ ಪಡೆದರು.

ಇದಕ್ಕೂ ಮೊದಲು ಬ್ಯಾಟ್​​ ಮಾಡಿದ ಶ್ರೀಲಂಕಾ ಏಂಜಲೊ ಮ್ಯಾಥ್ಯೂಸ್​​​​​​ (113) ಶತಕ ಮತ್ತು ಲಾಹಿರು ಥಿರುಮನ್ನೆ ಅರ್ಧ ಶತಕ (53)ದ ನೆರವಿನಿಂದ ಸವಾಲಿನ ಮೊತ್ತ ಪೇರಿಸಿಸರು, ನಾಯಕ ದಿಮುತ್​ ಕರುಣಾರತ್ನೆ 10 ಹಾಗೂ ಕುಸಾಲ್​​ ಪೆರೆರಾ 18, ಅವಿಶಾಕ ಫೆರ್ನಾಂಡೊ 20 ಮತ್ತು ಕುಸಾಲ್​​ ಮೆಂಡೀಸ್​​​​ 3 ರನ್ ಗಳಿಸಿ ಔಟಾದರು.

ಭಾರತದ ವೇಗಿ ಜಸ್ಪ್ರೀತ್​ ಬುಮ್ರಾ 37ಕ್ಕೆ 3 ವಿಕೆಟ್ ಪಡೆದರೆ, ಭುವನೇಶ್ವರ್​​ ಕುಮಾರ್​, ಹಾರ್ದಿಕ್​​ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್​​ ತಲಾ ಒಂದು ವಿಕೆಟ್​​ ಕಬಳಿಸಿದರು. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮ ಐದು ಶತಕ ಬಾರಿಸಿದ್ದಾರೆ.

ಲೀಗ್​​ ಹಂತ ಕೊನೆಯ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಕೊಹ್ಲಿ ಪಡೆ ವಿಶ್ವಕಪ್​ನ 9 ಪಂದ್ಯಗಳಲ್ಲಿ 7 ರಲ್ಲಿ ಜಯ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡ ದಕ್ಷಿಣ ಆಪ್ರಿಕಾ ಎದುರು ಗೆಲುವು ಸಾಧಿಸಿದರೆ, ಭಾರತ ಎರಡನೇ ಸ್ಥಾನಕ್ಕಿಳಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

22 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago