ಲೀಡ್ಸ್: ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ (111) ಹಾಗೂ ರೋಹಿತ್ ಶರ್ಮ (103) ಅವರ ಸ್ಫೋಟಕ ಶತಕಗಳ ನೆರವಿನಿಂದ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಎದುರು 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ.
ಇಲ್ಲಿನ ಹೇಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಂಕಾ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 43.3 ಗಳಲ್ಲಿ 3 ವಿಕೆಟ್ ನಷ್ಟಕ್ಕೆ 265 ಗಳಿಸಿ ಗೆಲುವಿನ ನಗೆ ಬೀರಿತು.
ಭಾರತದ ಪರ ರಾಹುಲ್ 111, ರೋಹಿತ್ 103, ನಾಯಕ ವಿರಾಟ್ ಕೊಹ್ಲಿ 34* ಉತ್ತಮ ಆಟವಾಡಿದರೆ, ರಿಷಬ್ ಪಂತ್ 4 ಮತ್ತು ಹಾರ್ದಿಕ್ ಪಾಂಡ್ಯ 7* ರನ್ ಗಳಿಸಿದರು.
ಶ್ರೀಲಂಕಾ ಪರ ಲಸಿತ್ ಮಲಿಂಗಾ, ಕುಸಾನ್ ರಜಿತಾ ಹಾಗೂ ಇಸ್ರು ಉಡಾನ ತಲಾ ಒಂದು ವಿಕೆಟ್ ಪಡೆದರು.
ಇದಕ್ಕೂ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಏಂಜಲೊ ಮ್ಯಾಥ್ಯೂಸ್ (113) ಶತಕ ಮತ್ತು ಲಾಹಿರು ಥಿರುಮನ್ನೆ ಅರ್ಧ ಶತಕ (53)ದ ನೆರವಿನಿಂದ ಸವಾಲಿನ ಮೊತ್ತ ಪೇರಿಸಿಸರು, ನಾಯಕ ದಿಮುತ್ ಕರುಣಾರತ್ನೆ 10 ಹಾಗೂ ಕುಸಾಲ್ ಪೆರೆರಾ 18, ಅವಿಶಾಕ ಫೆರ್ನಾಂಡೊ 20 ಮತ್ತು ಕುಸಾಲ್ ಮೆಂಡೀಸ್ 3 ರನ್ ಗಳಿಸಿ ಔಟಾದರು.
ಭಾರತದ ವೇಗಿ ಜಸ್ಪ್ರೀತ್ ಬುಮ್ರಾ 37ಕ್ಕೆ 3 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ತಲಾ ಒಂದು ವಿಕೆಟ್ ಕಬಳಿಸಿದರು. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮ ಐದು ಶತಕ ಬಾರಿಸಿದ್ದಾರೆ.
ಲೀಗ್ ಹಂತ ಕೊನೆಯ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಕೊಹ್ಲಿ ಪಡೆ ವಿಶ್ವಕಪ್ನ 9 ಪಂದ್ಯಗಳಲ್ಲಿ 7 ರಲ್ಲಿ ಜಯ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡ ದಕ್ಷಿಣ ಆಪ್ರಿಕಾ ಎದುರು ಗೆಲುವು ಸಾಧಿಸಿದರೆ, ಭಾರತ ಎರಡನೇ ಸ್ಥಾನಕ್ಕಿಳಿಯಲಿದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…