Advertisement
ರಾಷ್ಟ್ರೀಯ

ರೋಹಿತ್, ರಾಹುಲ್ ಭರ್ಜರಿ ಶತಕ- ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಜಯ

Share

ಲೀಡ್ಸ್​: ಆರಂಭಿಕ ಆಟಗಾರರಾದ ಕೆ.ಎಲ್​​ ರಾಹುಲ್​​​ (111) ಹಾಗೂ ರೋಹಿತ್​​ ಶರ್ಮ (103) ಅವರ ಸ್ಫೋಟಕ ಶತಕಗಳ ನೆರವಿನಿಂದ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಎದುರು 7 ವಿಕೆಟ್​​​​​​ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ಹೇಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​​ ಮಾಡಿದ ಲಂಕಾ 50 ಓವರ್​ಗಳಲ್ಲಿ 7 ವಿಕೆಟ್​​ ನಷ್ಟಕ್ಕೆ 264 ರನ್​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 43.3 ​ಗಳಲ್ಲಿ 3 ವಿಕೆಟ್​​ ನಷ್ಟಕ್ಕೆ 265 ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ರಾಹುಲ್​​ 111, ರೋಹಿತ್​​​ 103, ನಾಯಕ ವಿರಾಟ್​​ ಕೊಹ್ಲಿ 34* ಉತ್ತಮ ಆಟವಾಡಿದರೆ, ರಿಷಬ್​​​ ಪಂತ್​ 4 ಮತ್ತು ಹಾರ್ದಿಕ್​​ ಪಾಂಡ್ಯ 7* ರನ್ ಗಳಿಸಿದರು.
ಶ್ರೀಲಂಕಾ ಪರ ಲಸಿತ್​​ ಮಲಿಂಗಾ, ಕುಸಾನ್​​ ರಜಿತಾ ಹಾಗೂ ಇಸ್ರು ಉಡಾನ ತಲಾ ಒಂದು ವಿಕೆಟ್​​ ಪಡೆದರು.

ಇದಕ್ಕೂ ಮೊದಲು ಬ್ಯಾಟ್​​ ಮಾಡಿದ ಶ್ರೀಲಂಕಾ ಏಂಜಲೊ ಮ್ಯಾಥ್ಯೂಸ್​​​​​​ (113) ಶತಕ ಮತ್ತು ಲಾಹಿರು ಥಿರುಮನ್ನೆ ಅರ್ಧ ಶತಕ (53)ದ ನೆರವಿನಿಂದ ಸವಾಲಿನ ಮೊತ್ತ ಪೇರಿಸಿಸರು, ನಾಯಕ ದಿಮುತ್​ ಕರುಣಾರತ್ನೆ 10 ಹಾಗೂ ಕುಸಾಲ್​​ ಪೆರೆರಾ 18, ಅವಿಶಾಕ ಫೆರ್ನಾಂಡೊ 20 ಮತ್ತು ಕುಸಾಲ್​​ ಮೆಂಡೀಸ್​​​​ 3 ರನ್ ಗಳಿಸಿ ಔಟಾದರು.

ಭಾರತದ ವೇಗಿ ಜಸ್ಪ್ರೀತ್​ ಬುಮ್ರಾ 37ಕ್ಕೆ 3 ವಿಕೆಟ್ ಪಡೆದರೆ, ಭುವನೇಶ್ವರ್​​ ಕುಮಾರ್​, ಹಾರ್ದಿಕ್​​ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್​​ ತಲಾ ಒಂದು ವಿಕೆಟ್​​ ಕಬಳಿಸಿದರು. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮ ಐದು ಶತಕ ಬಾರಿಸಿದ್ದಾರೆ.

ಲೀಗ್​​ ಹಂತ ಕೊನೆಯ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಕೊಹ್ಲಿ ಪಡೆ ವಿಶ್ವಕಪ್​ನ 9 ಪಂದ್ಯಗಳಲ್ಲಿ 7 ರಲ್ಲಿ ಜಯ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡ ದಕ್ಷಿಣ ಆಪ್ರಿಕಾ ಎದುರು ಗೆಲುವು ಸಾಧಿಸಿದರೆ, ಭಾರತ ಎರಡನೇ ಸ್ಥಾನಕ್ಕಿಳಿಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

20 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

20 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

20 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago