Advertisement
ರಾಷ್ಟ್ರೀಯ

ರೋಹಿತ್, ರಾಹುಲ್ ಭರ್ಜರಿ ಶತಕ- ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಜಯ

Share

ಲೀಡ್ಸ್​: ಆರಂಭಿಕ ಆಟಗಾರರಾದ ಕೆ.ಎಲ್​​ ರಾಹುಲ್​​​ (111) ಹಾಗೂ ರೋಹಿತ್​​ ಶರ್ಮ (103) ಅವರ ಸ್ಫೋಟಕ ಶತಕಗಳ ನೆರವಿನಿಂದ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಎದುರು 7 ವಿಕೆಟ್​​​​​​ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ಹೇಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​​ ಮಾಡಿದ ಲಂಕಾ 50 ಓವರ್​ಗಳಲ್ಲಿ 7 ವಿಕೆಟ್​​ ನಷ್ಟಕ್ಕೆ 264 ರನ್​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 43.3 ​ಗಳಲ್ಲಿ 3 ವಿಕೆಟ್​​ ನಷ್ಟಕ್ಕೆ 265 ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ರಾಹುಲ್​​ 111, ರೋಹಿತ್​​​ 103, ನಾಯಕ ವಿರಾಟ್​​ ಕೊಹ್ಲಿ 34* ಉತ್ತಮ ಆಟವಾಡಿದರೆ, ರಿಷಬ್​​​ ಪಂತ್​ 4 ಮತ್ತು ಹಾರ್ದಿಕ್​​ ಪಾಂಡ್ಯ 7* ರನ್ ಗಳಿಸಿದರು.
ಶ್ರೀಲಂಕಾ ಪರ ಲಸಿತ್​​ ಮಲಿಂಗಾ, ಕುಸಾನ್​​ ರಜಿತಾ ಹಾಗೂ ಇಸ್ರು ಉಡಾನ ತಲಾ ಒಂದು ವಿಕೆಟ್​​ ಪಡೆದರು.

ಇದಕ್ಕೂ ಮೊದಲು ಬ್ಯಾಟ್​​ ಮಾಡಿದ ಶ್ರೀಲಂಕಾ ಏಂಜಲೊ ಮ್ಯಾಥ್ಯೂಸ್​​​​​​ (113) ಶತಕ ಮತ್ತು ಲಾಹಿರು ಥಿರುಮನ್ನೆ ಅರ್ಧ ಶತಕ (53)ದ ನೆರವಿನಿಂದ ಸವಾಲಿನ ಮೊತ್ತ ಪೇರಿಸಿಸರು, ನಾಯಕ ದಿಮುತ್​ ಕರುಣಾರತ್ನೆ 10 ಹಾಗೂ ಕುಸಾಲ್​​ ಪೆರೆರಾ 18, ಅವಿಶಾಕ ಫೆರ್ನಾಂಡೊ 20 ಮತ್ತು ಕುಸಾಲ್​​ ಮೆಂಡೀಸ್​​​​ 3 ರನ್ ಗಳಿಸಿ ಔಟಾದರು.

ಭಾರತದ ವೇಗಿ ಜಸ್ಪ್ರೀತ್​ ಬುಮ್ರಾ 37ಕ್ಕೆ 3 ವಿಕೆಟ್ ಪಡೆದರೆ, ಭುವನೇಶ್ವರ್​​ ಕುಮಾರ್​, ಹಾರ್ದಿಕ್​​ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್​​ ತಲಾ ಒಂದು ವಿಕೆಟ್​​ ಕಬಳಿಸಿದರು. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮ ಐದು ಶತಕ ಬಾರಿಸಿದ್ದಾರೆ.

ಲೀಗ್​​ ಹಂತ ಕೊನೆಯ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಕೊಹ್ಲಿ ಪಡೆ ವಿಶ್ವಕಪ್​ನ 9 ಪಂದ್ಯಗಳಲ್ಲಿ 7 ರಲ್ಲಿ ಜಯ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡ ದಕ್ಷಿಣ ಆಪ್ರಿಕಾ ಎದುರು ಗೆಲುವು ಸಾಧಿಸಿದರೆ, ಭಾರತ ಎರಡನೇ ಸ್ಥಾನಕ್ಕಿಳಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

18 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago