Advertisement
ರಾಷ್ಟ್ರೀಯ

ರೋಹಿತ್, ರಾಹುಲ್ ಭರ್ಜರಿ ಶತಕ- ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಜಯ

Share

ಲೀಡ್ಸ್​: ಆರಂಭಿಕ ಆಟಗಾರರಾದ ಕೆ.ಎಲ್​​ ರಾಹುಲ್​​​ (111) ಹಾಗೂ ರೋಹಿತ್​​ ಶರ್ಮ (103) ಅವರ ಸ್ಫೋಟಕ ಶತಕಗಳ ನೆರವಿನಿಂದ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಎದುರು 7 ವಿಕೆಟ್​​​​​​ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ಹೇಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​​ ಮಾಡಿದ ಲಂಕಾ 50 ಓವರ್​ಗಳಲ್ಲಿ 7 ವಿಕೆಟ್​​ ನಷ್ಟಕ್ಕೆ 264 ರನ್​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 43.3 ​ಗಳಲ್ಲಿ 3 ವಿಕೆಟ್​​ ನಷ್ಟಕ್ಕೆ 265 ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ರಾಹುಲ್​​ 111, ರೋಹಿತ್​​​ 103, ನಾಯಕ ವಿರಾಟ್​​ ಕೊಹ್ಲಿ 34* ಉತ್ತಮ ಆಟವಾಡಿದರೆ, ರಿಷಬ್​​​ ಪಂತ್​ 4 ಮತ್ತು ಹಾರ್ದಿಕ್​​ ಪಾಂಡ್ಯ 7* ರನ್ ಗಳಿಸಿದರು.
ಶ್ರೀಲಂಕಾ ಪರ ಲಸಿತ್​​ ಮಲಿಂಗಾ, ಕುಸಾನ್​​ ರಜಿತಾ ಹಾಗೂ ಇಸ್ರು ಉಡಾನ ತಲಾ ಒಂದು ವಿಕೆಟ್​​ ಪಡೆದರು.

ಇದಕ್ಕೂ ಮೊದಲು ಬ್ಯಾಟ್​​ ಮಾಡಿದ ಶ್ರೀಲಂಕಾ ಏಂಜಲೊ ಮ್ಯಾಥ್ಯೂಸ್​​​​​​ (113) ಶತಕ ಮತ್ತು ಲಾಹಿರು ಥಿರುಮನ್ನೆ ಅರ್ಧ ಶತಕ (53)ದ ನೆರವಿನಿಂದ ಸವಾಲಿನ ಮೊತ್ತ ಪೇರಿಸಿಸರು, ನಾಯಕ ದಿಮುತ್​ ಕರುಣಾರತ್ನೆ 10 ಹಾಗೂ ಕುಸಾಲ್​​ ಪೆರೆರಾ 18, ಅವಿಶಾಕ ಫೆರ್ನಾಂಡೊ 20 ಮತ್ತು ಕುಸಾಲ್​​ ಮೆಂಡೀಸ್​​​​ 3 ರನ್ ಗಳಿಸಿ ಔಟಾದರು.

ಭಾರತದ ವೇಗಿ ಜಸ್ಪ್ರೀತ್​ ಬುಮ್ರಾ 37ಕ್ಕೆ 3 ವಿಕೆಟ್ ಪಡೆದರೆ, ಭುವನೇಶ್ವರ್​​ ಕುಮಾರ್​, ಹಾರ್ದಿಕ್​​ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್​​ ತಲಾ ಒಂದು ವಿಕೆಟ್​​ ಕಬಳಿಸಿದರು. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮ ಐದು ಶತಕ ಬಾರಿಸಿದ್ದಾರೆ.

ಲೀಗ್​​ ಹಂತ ಕೊನೆಯ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಕೊಹ್ಲಿ ಪಡೆ ವಿಶ್ವಕಪ್​ನ 9 ಪಂದ್ಯಗಳಲ್ಲಿ 7 ರಲ್ಲಿ ಜಯ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡ ದಕ್ಷಿಣ ಆಪ್ರಿಕಾ ಎದುರು ಗೆಲುವು ಸಾಧಿಸಿದರೆ, ಭಾರತ ಎರಡನೇ ಸ್ಥಾನಕ್ಕಿಳಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

8 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

12 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

23 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

1 day ago