ಲೀಡ್ಸ್: ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ (111) ಹಾಗೂ ರೋಹಿತ್ ಶರ್ಮ (103) ಅವರ ಸ್ಫೋಟಕ ಶತಕಗಳ ನೆರವಿನಿಂದ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಎದುರು 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ.
ಇಲ್ಲಿನ ಹೇಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಂಕಾ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 43.3 ಗಳಲ್ಲಿ 3 ವಿಕೆಟ್ ನಷ್ಟಕ್ಕೆ 265 ಗಳಿಸಿ ಗೆಲುವಿನ ನಗೆ ಬೀರಿತು.
ಭಾರತದ ಪರ ರಾಹುಲ್ 111, ರೋಹಿತ್ 103, ನಾಯಕ ವಿರಾಟ್ ಕೊಹ್ಲಿ 34* ಉತ್ತಮ ಆಟವಾಡಿದರೆ, ರಿಷಬ್ ಪಂತ್ 4 ಮತ್ತು ಹಾರ್ದಿಕ್ ಪಾಂಡ್ಯ 7* ರನ್ ಗಳಿಸಿದರು.
ಶ್ರೀಲಂಕಾ ಪರ ಲಸಿತ್ ಮಲಿಂಗಾ, ಕುಸಾನ್ ರಜಿತಾ ಹಾಗೂ ಇಸ್ರು ಉಡಾನ ತಲಾ ಒಂದು ವಿಕೆಟ್ ಪಡೆದರು.
ಇದಕ್ಕೂ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಏಂಜಲೊ ಮ್ಯಾಥ್ಯೂಸ್ (113) ಶತಕ ಮತ್ತು ಲಾಹಿರು ಥಿರುಮನ್ನೆ ಅರ್ಧ ಶತಕ (53)ದ ನೆರವಿನಿಂದ ಸವಾಲಿನ ಮೊತ್ತ ಪೇರಿಸಿಸರು, ನಾಯಕ ದಿಮುತ್ ಕರುಣಾರತ್ನೆ 10 ಹಾಗೂ ಕುಸಾಲ್ ಪೆರೆರಾ 18, ಅವಿಶಾಕ ಫೆರ್ನಾಂಡೊ 20 ಮತ್ತು ಕುಸಾಲ್ ಮೆಂಡೀಸ್ 3 ರನ್ ಗಳಿಸಿ ಔಟಾದರು.
ಭಾರತದ ವೇಗಿ ಜಸ್ಪ್ರೀತ್ ಬುಮ್ರಾ 37ಕ್ಕೆ 3 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ತಲಾ ಒಂದು ವಿಕೆಟ್ ಕಬಳಿಸಿದರು. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮ ಐದು ಶತಕ ಬಾರಿಸಿದ್ದಾರೆ.
ಲೀಗ್ ಹಂತ ಕೊನೆಯ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಕೊಹ್ಲಿ ಪಡೆ ವಿಶ್ವಕಪ್ನ 9 ಪಂದ್ಯಗಳಲ್ಲಿ 7 ರಲ್ಲಿ ಜಯ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡ ದಕ್ಷಿಣ ಆಪ್ರಿಕಾ ಎದುರು ಗೆಲುವು ಸಾಧಿಸಿದರೆ, ಭಾರತ ಎರಡನೇ ಸ್ಥಾನಕ್ಕಿಳಿಯಲಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…