Advertisement
ರಾಷ್ಟ್ರೀಯ

ರೋಹಿತ್, ರಾಹುಲ್ ಭರ್ಜರಿ ಶತಕ- ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಜಯ

Share

ಲೀಡ್ಸ್​: ಆರಂಭಿಕ ಆಟಗಾರರಾದ ಕೆ.ಎಲ್​​ ರಾಹುಲ್​​​ (111) ಹಾಗೂ ರೋಹಿತ್​​ ಶರ್ಮ (103) ಅವರ ಸ್ಫೋಟಕ ಶತಕಗಳ ನೆರವಿನಿಂದ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಎದುರು 7 ವಿಕೆಟ್​​​​​​ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ಹೇಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​​ ಮಾಡಿದ ಲಂಕಾ 50 ಓವರ್​ಗಳಲ್ಲಿ 7 ವಿಕೆಟ್​​ ನಷ್ಟಕ್ಕೆ 264 ರನ್​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 43.3 ​ಗಳಲ್ಲಿ 3 ವಿಕೆಟ್​​ ನಷ್ಟಕ್ಕೆ 265 ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ರಾಹುಲ್​​ 111, ರೋಹಿತ್​​​ 103, ನಾಯಕ ವಿರಾಟ್​​ ಕೊಹ್ಲಿ 34* ಉತ್ತಮ ಆಟವಾಡಿದರೆ, ರಿಷಬ್​​​ ಪಂತ್​ 4 ಮತ್ತು ಹಾರ್ದಿಕ್​​ ಪಾಂಡ್ಯ 7* ರನ್ ಗಳಿಸಿದರು.
ಶ್ರೀಲಂಕಾ ಪರ ಲಸಿತ್​​ ಮಲಿಂಗಾ, ಕುಸಾನ್​​ ರಜಿತಾ ಹಾಗೂ ಇಸ್ರು ಉಡಾನ ತಲಾ ಒಂದು ವಿಕೆಟ್​​ ಪಡೆದರು.

ಇದಕ್ಕೂ ಮೊದಲು ಬ್ಯಾಟ್​​ ಮಾಡಿದ ಶ್ರೀಲಂಕಾ ಏಂಜಲೊ ಮ್ಯಾಥ್ಯೂಸ್​​​​​​ (113) ಶತಕ ಮತ್ತು ಲಾಹಿರು ಥಿರುಮನ್ನೆ ಅರ್ಧ ಶತಕ (53)ದ ನೆರವಿನಿಂದ ಸವಾಲಿನ ಮೊತ್ತ ಪೇರಿಸಿಸರು, ನಾಯಕ ದಿಮುತ್​ ಕರುಣಾರತ್ನೆ 10 ಹಾಗೂ ಕುಸಾಲ್​​ ಪೆರೆರಾ 18, ಅವಿಶಾಕ ಫೆರ್ನಾಂಡೊ 20 ಮತ್ತು ಕುಸಾಲ್​​ ಮೆಂಡೀಸ್​​​​ 3 ರನ್ ಗಳಿಸಿ ಔಟಾದರು.

ಭಾರತದ ವೇಗಿ ಜಸ್ಪ್ರೀತ್​ ಬುಮ್ರಾ 37ಕ್ಕೆ 3 ವಿಕೆಟ್ ಪಡೆದರೆ, ಭುವನೇಶ್ವರ್​​ ಕುಮಾರ್​, ಹಾರ್ದಿಕ್​​ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್​​ ತಲಾ ಒಂದು ವಿಕೆಟ್​​ ಕಬಳಿಸಿದರು. ಈ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮ ಐದು ಶತಕ ಬಾರಿಸಿದ್ದಾರೆ.

ಲೀಗ್​​ ಹಂತ ಕೊನೆಯ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಕೊಹ್ಲಿ ಪಡೆ ವಿಶ್ವಕಪ್​ನ 9 ಪಂದ್ಯಗಳಲ್ಲಿ 7 ರಲ್ಲಿ ಜಯ ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡ ದಕ್ಷಿಣ ಆಪ್ರಿಕಾ ಎದುರು ಗೆಲುವು ಸಾಧಿಸಿದರೆ, ಭಾರತ ಎರಡನೇ ಸ್ಥಾನಕ್ಕಿಳಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

6 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

7 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

22 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago