ಮಡಿಕೇರಿ: ವಿರಾಜಪೇಟೆ ತಹಶೀಲ್ದಾರ್ ಪುರಂದರ ಅವರು ತಮ್ಮ ಕಚೇರಿಯಲ್ಲೇ ಶುಕ್ರವಾರ ಲಂಚ ಸ್ವೀಕರಿಸುವಾಗ ಏಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿರಾಜಪೇಟೆ ತಾಲೂಕು ತೂಚಮಕೇರಿಯ ನಿವಾಸಿ ಪಿ ಎಂ ನರೇಂದ್ರ ಎಂಬುವವರು ತಮ್ಮ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲಸ ಮಾಡಿಕೊಡಲು ಸತಾಯಿಸುತಿದ್ದ ತಹಶೀಲ್ದಾರ್ ಅವರು ಸಿಬ್ಬಂದಿ ಜಾಗೃತ್ ಮೂಲಕ 15 ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಕೊನೆಗೆ 9 ಸಾವಿರ ರೂಪಾಯಿ ಕೊಡಲು ನರೇಂದ್ರ ಸಮ್ಮತಿಸಿದ್ದರು. ಇಂದು ಈ ಲಂಚದ ಮೊದಲ ಕಂತಾದ 2000 ರೂಪಾಯಿಗಳನ್ನು ತಮ್ಮ ಕಚೇರಿಯಲ್ಲೇ ಸ್ವೀಕರಿಸುತಿದ್ದಾಗ ಏಸಿಬಿ ಡಿವೈಎಸ್ಪಿ ಪೂರ್ಣಚಂದ್ರ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ್ ಧಾಳಿ ನಡೆಸಿ ಬಂಧಿಸಿದ್ದಾರೆ. ಸಿಬ್ಬಂದಿ ಜಾಗೃತ್ ಎಂಬಾತನನ್ನೂ ಬಂಧಿಸಲಾಗಿದ್ದು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು ತನಿಖೆ ನಡೆಯುತ್ತಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…