ಮಡಿಕೇರಿ: ವಿರಾಜಪೇಟೆ ತಹಶೀಲ್ದಾರ್ ಪುರಂದರ ಅವರು ತಮ್ಮ ಕಚೇರಿಯಲ್ಲೇ ಶುಕ್ರವಾರ ಲಂಚ ಸ್ವೀಕರಿಸುವಾಗ ಏಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿರಾಜಪೇಟೆ ತಾಲೂಕು ತೂಚಮಕೇರಿಯ ನಿವಾಸಿ ಪಿ ಎಂ ನರೇಂದ್ರ ಎಂಬುವವರು ತಮ್ಮ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲಸ ಮಾಡಿಕೊಡಲು ಸತಾಯಿಸುತಿದ್ದ ತಹಶೀಲ್ದಾರ್ ಅವರು ಸಿಬ್ಬಂದಿ ಜಾಗೃತ್ ಮೂಲಕ 15 ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಕೊನೆಗೆ 9 ಸಾವಿರ ರೂಪಾಯಿ ಕೊಡಲು ನರೇಂದ್ರ ಸಮ್ಮತಿಸಿದ್ದರು. ಇಂದು ಈ ಲಂಚದ ಮೊದಲ ಕಂತಾದ 2000 ರೂಪಾಯಿಗಳನ್ನು ತಮ್ಮ ಕಚೇರಿಯಲ್ಲೇ ಸ್ವೀಕರಿಸುತಿದ್ದಾಗ ಏಸಿಬಿ ಡಿವೈಎಸ್ಪಿ ಪೂರ್ಣಚಂದ್ರ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ್ ಧಾಳಿ ನಡೆಸಿ ಬಂಧಿಸಿದ್ದಾರೆ. ಸಿಬ್ಬಂದಿ ಜಾಗೃತ್ ಎಂಬಾತನನ್ನೂ ಬಂಧಿಸಲಾಗಿದ್ದು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು ತನಿಖೆ ನಡೆಯುತ್ತಿದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…