ಮಡಿಕೇರಿ: ವಿರಾಜಪೇಟೆ ತಹಶೀಲ್ದಾರ್ ಪುರಂದರ ಅವರು ತಮ್ಮ ಕಚೇರಿಯಲ್ಲೇ ಶುಕ್ರವಾರ ಲಂಚ ಸ್ವೀಕರಿಸುವಾಗ ಏಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿರಾಜಪೇಟೆ ತಾಲೂಕು ತೂಚಮಕೇರಿಯ ನಿವಾಸಿ ಪಿ ಎಂ ನರೇಂದ್ರ ಎಂಬುವವರು ತಮ್ಮ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲಸ ಮಾಡಿಕೊಡಲು ಸತಾಯಿಸುತಿದ್ದ ತಹಶೀಲ್ದಾರ್ ಅವರು ಸಿಬ್ಬಂದಿ ಜಾಗೃತ್ ಮೂಲಕ 15 ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಕೊನೆಗೆ 9 ಸಾವಿರ ರೂಪಾಯಿ ಕೊಡಲು ನರೇಂದ್ರ ಸಮ್ಮತಿಸಿದ್ದರು. ಇಂದು ಈ ಲಂಚದ ಮೊದಲ ಕಂತಾದ 2000 ರೂಪಾಯಿಗಳನ್ನು ತಮ್ಮ ಕಚೇರಿಯಲ್ಲೇ ಸ್ವೀಕರಿಸುತಿದ್ದಾಗ ಏಸಿಬಿ ಡಿವೈಎಸ್ಪಿ ಪೂರ್ಣಚಂದ್ರ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ್ ಧಾಳಿ ನಡೆಸಿ ಬಂಧಿಸಿದ್ದಾರೆ. ಸಿಬ್ಬಂದಿ ಜಾಗೃತ್ ಎಂಬಾತನನ್ನೂ ಬಂಧಿಸಲಾಗಿದ್ದು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು ತನಿಖೆ ನಡೆಯುತ್ತಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…