Advertisement
ಸುದ್ದಿಗಳು

ಲಂಡನ್ ಪ್ರತಿಷ್ಠಿತ ಎಫ್ಆರ್ ಸಿಆರ್ ಪರೀಕ್ಷೆಯಲ್ಲಿ ಡಾ|ರಾಮಕಿಶೋರ್ ಕಾನಾವು ತೇರ್ಗಡೆ

Share

ಸುಳ್ಯ : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ರೆಡಿಯೋಲಾಜಿಸ್ಟ್ ಆಗಿರುವ ಡಾ| ರಾಮಕಿಶೋರ್ ಕಾನಾವು ಅವರು ಲಂಡನ್‌ ಪ್ರತಿಷ್ಠಿತ ರಾಯಲ್ ಕಾಲೇಜು ಆಫ್ ರೆಡಿಯೋಲಾಜಿಸ್ಟ್ಸ್ ವೈದ್ಯಕೀಯ ಪರೀಕ್ಷೆಯಲ್ಲಿ (ಎಫ್ ಆರ್ ಸಿಆರ್ ಯುಕೆ) ಉತ್ತಮ ಅಂಕ ಪಡೆದು ತೇರ್ಗಡೆ ಹೊಂದಿ ಸಾಧನೆ ತೋರಿದ್ದಾರೆ.

ಪ್ರಗತಿಪರ ಕೃಷಿಕ ತಿರುಮಲೇಶ್ವರ ಭಟ್ ಕಾನಾವು ಮತ್ತು ಅನಿತಾ ಟಿ.ಭಟ್ ಕಾನಾವು ಅವರ ಪುತ್ರನಾಗಿರುವ ಇವರು, ಮುಕ್ಕೂರು ಸ.ಹಿ.ಪ್ರಾ.ಶಾಲೆ, ಚೊಕ್ಕಾಡಿ ಸತ್ಯಸಾಯಿ ವಿದ್ಯಾಕೇಂದ್ರ, ಅಳಿಕೆ ಸತ್ಯಸಾಯಿ ವಿದ್ಯಾಕೇಂದ್ರಗಳಲ್ಲಿ ಪ್ರಾಥಮಿಕ, ಪ್ರೌಢ, ಪಿಯು ಶಿಕ್ಷಣ ಪೂರೈಸಿ ಆ ಬಳಿಕ ಎಸ್ಎಸ್ ಮೆಡಿಕಲ್ ಕಾಲೇಜು ದಾವಣೆಗೆರೆಯಲ್ಲಿ ಎಂಬಿಬಿಎಸ್ ಪದವಿ ಪಡೆದರು. ಅನಂತರ ಅರ್ ಮೇನಿಯಾದಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ (ಎಂ.ಡಿ) ಪಡೆದರು. ಪ್ರತಿಷ್ಠಿತ ವೆಲ್ಲೂರು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ರೆಡಿಯೋಲಾಜಿಸ್ಟ್ ಆಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದರು. ಪ್ರಸ್ತುತ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ರೆಡಿಯೋಲಾಜಿಸ್ಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಪುತ್ತೂರು ಸಿಟಿ ಆಸ್ಪತ್ರೆ (ಪಿಸಿಎಚ್) ಇದರ ಪಾಲುದಾರರಾಗಿದ್ದಾರೆ.

ಪತ್ನಿ ಡಾ|ಅಂಬಿಕಾ ಕಾನಾವು ಅವರು ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಕಣ್ಣಿನ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

7 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

8 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

15 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

24 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

1 day ago