ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ ಪೂಜೆಗೆ ಸಿದ್ಧತೆ ನಡೆಯುತ್ತಿದೆ.
ದೇವರ ಲಕ್ಷದೀಪೋತ್ಸವದ ಸಂದರ್ಭ ಭಕ್ತಾದಿಗಳ ಸಹಕಾರದಿಂದ ಲಕ್ಷ ಹಣತೆಗಳನ್ನು ಹಚ್ಚಲಾಗುತ್ತದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ದೇವಳದ ಗೋಪುರದಿಂದ ಕಾಶಿಕಟ್ಟೆವರೆಗೆ ಲಕ್ಷ ಹಣತೆಗಳು ಬೆಳಗಲಿದೆ.ದೇವಳದ ಹೊರಾಂಗಣದಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ನಡೆಯಲಿದೆ.
ಗುರ್ಜಿ ಪೂಜೆ:
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ಶ್ರೀ ದೇವರಿಗೆ ಗುರ್ಜಿಯಲ್ಲಿ ಪೂಜೆ ನೆರವೇರುತ್ತದೆ. ಈ ಮೊದಲು ಕಾಶಿಕಟ್ಟೆ ಮಹಾಗಣಪತಿಗೆ ದೀಪಾರಾಧನೆಯುಕ್ತ ರಂಗಪೂಜೆ ನಡೆಯಲಿದೆ.
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…