Advertisement
ಸುದ್ದಿಗಳು

ಲಕ್ಷದೀಪೋತ್ಸವಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಜ್ಜಾಗುತ್ತಿದೆ : ಗುರ್ಜಿ ಪೂಜೆಗೆ ಸಿದ್ಧವಾಗುತ್ತಿದೆ ಕಾಶಿಕಟ್ಟೆ

Share

ಸುಬ್ರಹ್ಮಣ್ಯ:  ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.  ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ ಪೂಜೆಗೆ ಸಿದ್ಧತೆ ನಡೆಯುತ್ತಿದೆ.

ದೇವರ ಲಕ್ಷದೀಪೋತ್ಸವದ ಸಂದರ್ಭ ಭಕ್ತಾದಿಗಳ ಸಹಕಾರದಿಂದ  ಲಕ್ಷ ಹಣತೆಗಳನ್ನು ಹಚ್ಚಲಾಗುತ್ತದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ದೇವಳದ ಗೋಪುರದಿಂದ ಕಾಶಿಕಟ್ಟೆವರೆಗೆ ಲಕ್ಷ ಹಣತೆಗಳು ಬೆಳಗಲಿದೆ.ದೇವಳದ ಹೊರಾಂಗಣದಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ  ನಡೆಯಲಿದೆ.

ಗುರ್ಜಿ ಪೂಜೆ:
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ಶ್ರೀ ದೇವರಿಗೆ ಗುರ್ಜಿಯಲ್ಲಿ ಪೂಜೆ ನೆರವೇರುತ್ತದೆ. ಈ ಮೊದಲು ಕಾಶಿಕಟ್ಟೆ ಮಹಾಗಣಪತಿಗೆ ದೀಪಾರಾಧನೆಯುಕ್ತ ರಂಗಪೂಜೆ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

7 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

14 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

14 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

23 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago