ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ ಪೂಜೆಗೆ ಸಿದ್ಧತೆ ನಡೆಯುತ್ತಿದೆ.
ದೇವರ ಲಕ್ಷದೀಪೋತ್ಸವದ ಸಂದರ್ಭ ಭಕ್ತಾದಿಗಳ ಸಹಕಾರದಿಂದ ಲಕ್ಷ ಹಣತೆಗಳನ್ನು ಹಚ್ಚಲಾಗುತ್ತದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ದೇವಳದ ಗೋಪುರದಿಂದ ಕಾಶಿಕಟ್ಟೆವರೆಗೆ ಲಕ್ಷ ಹಣತೆಗಳು ಬೆಳಗಲಿದೆ.ದೇವಳದ ಹೊರಾಂಗಣದಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ನಡೆಯಲಿದೆ.
ಗುರ್ಜಿ ಪೂಜೆ:
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ಶ್ರೀ ದೇವರಿಗೆ ಗುರ್ಜಿಯಲ್ಲಿ ಪೂಜೆ ನೆರವೇರುತ್ತದೆ. ಈ ಮೊದಲು ಕಾಶಿಕಟ್ಟೆ ಮಹಾಗಣಪತಿಗೆ ದೀಪಾರಾಧನೆಯುಕ್ತ ರಂಗಪೂಜೆ ನಡೆಯಲಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…