Advertisement
ಧಾರ್ಮಿಕ

ಲಕ್ಷದೀಪೋತ್ಸವಕ್ಕೆ ಸಜ್ಜುಗೊಂಡ ಧರ್ಮಸ್ಥಳ

Share

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶುಕ್ರವಾರ ಹೊಸಕಟ್ಟೆ ಉತ್ಸವದೊಂದಿಗೆ ಶುಭಾರಂಭಗೊಳ್ಳುತ್ತದೆ.

ದೇವಸ್ಥಾನ, ಬೀಡು, ವಸತಿ ಛತ್ರಗಳು ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಮುಖ್ಯ ಪ್ರವೇಶದ್ವಾರದ ಬಳಿ ಕೆ.ಎಸ್.ಆರ್.ಟಿ.ಸಿ. ವಿಶೇಷ ಕೌಂಟರ್, ಪೊಲೀಸ್ ಕೌಂಟರ್ ತೆರೆಯಲಾಗಿದೆ. ಸ್ವಚ್ಛತಾ ಸೇನಾನಿಗಳು ಸ್ವಚ್ಛತೆ ಕಾಪಾಡಲು ವಿಶೇಷ ಶ್ರಮ ವಹಿಸುತ್ತಿದ್ದಾರೆ.

ಶುಕ್ರವಾರ ಸಂಜೆ ಉಜಿರೆಯಿಂದ ಧರ್ಮಸ್ಥಳಕ್ಕೆ ಹೊರಡುವ ಪಾದಯಾತ್ರೆಯ ಯಶಸ್ಸಿಗೆ ಸರ್ವರೂ ಸಹಕರಿಸಬೇಕೆಂದು ಶಾಸಕ ಹರೀಶ್ ಪೂಂಜ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಂಗಡಿಗಳು ಸಾಲು-ಸಾಲಾಗಿ ತೆರೆಯಲ್ಪಟ್ಟಿವೆ. ಹೋಟೆಲ್‍ಗಳು, ತಂಪು ಪಾನೀಯಗಳು, ಕಂಬಳಿ ಹಾಗೂ ಟೋಪಿ ವ್ಯಾಪಾರಿಗಳು ಹಾಗೂ ವೈವಿಧ್ಯಮಯ ಸರಕು ಮತ್ತು ತಿಂಡಿಗಳ ಅಂಗಡಿಗಳು ತೆರೆಯಲ್ಪಟ್ಟಿವೆ.

ನೇತ್ರಾವತಿ ಸ್ನಾನ ಘಟ್ಟದಿಂದ ಧರ್ಮಸ್ಥಳದವರೆಗೂ ದ್ವಿಪಥ ರಸ್ತೆ ನಿರ್ಮಾಣಗೊಂಡಿದ್ದು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಭಕ್ತರ ಸೇವೆಗೆ ದೇವಳದ ಸಿಬ್ಬಂದಿ, ಸ್ವಚ್ಛತಾ ಸೇನಾನಿಗಳು, ಪೊಲೀಸರು, ಗೃಹರಕ್ಷಕ ದಳದವರು, ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರು ಕಟಿಬದ್ಧರಾಗಿದ್ದಾರೆ. ವಸ್ತು ಪ್ರದರ್ಶನದಲ್ಲಿ ಜ್ಞಾನ-ವಿಜ್ಞಾನ-ಸುಜ್ಞಾನಕ್ಕೆ ಸಂಬಂಧಪಟ್ಟ ಮಳಿಗೆಗಳಿದ್ದು ಮಾಹಿತಿಯ ಕಣಜವಾಗಿದೆ. ಶುಕ್ರವಾರದಿಂದ ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

43 minutes ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

9 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

11 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

16 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

18 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago