Advertisement
MIRROR FOCUS

ಧರ್ಮಸ್ಥಳ ಲಕ್ಷದೀಪೋತ್ಸವದಲ್ಲಿ ಲಲಿತಮ್ಮನ ವ್ಯವಹಾರ ಸುಲಲಿತ

Share

ಧರ್ಮಸ್ಥಳ: ಲಕ್ಷದೀಪೋತ್ಸವ ಸಂದರ್ಭದಲ್ಲಿ ಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ.

ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನುತೆರೆದವರು ಲಿತಮ್ಮ. ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ ಮೊದಲಾದ ಸತ್ವಪೂರ್ಣ ಗ್ರಾಮೀಣ ಪೌಷ್ಠಿಕ ಆಹಾರಗಳು ಇವರಲ್ಲಿ ಮಿತದರದಲ್ಲಿ ಸಿಗುತ್ತವೆ. 25 ವರ್ಷಗಳ ಹಿಂದೆ ಇವರ ಗಂಡ ನಿಧನರಾದ ಬಳಿಕ “ಕಾಯಕವೇ ಕೈಲಾಸ” ಎಂದು ನಂಬಿ ಪುಟ್ಟ ಅಂಗಡಿ ಪ್ರಾರಂಭಿಸಿದ ಇವರು ಪ್ರಾಮಾಣಿಕ ವ್ಯವಹಾರ ನಡೆಸುತ್ತಾರೆ. ಅತಿಯಾದ ಲಾಭಗಳಿಸುವ ಹಂಬಲ ಈಕೆಗಿಲ್ಲ.

ಎಲ್ಲಾಖರ್ಚು, ವೆಚ್ಚ ಕಳೆದು ದಿನಕ್ಕೆ ಇನ್ನೂರು ರೂ.ನಿವ್ವಳ ಲಾಭಗಳಿಸುತ್ತೇನೆ. ಇದರಲ್ಲೆ ತನಗೆ ತೃಪ್ತಿ, ಸಂತೋಷವಿದೆ ಎಂದು ಲಲಿತಮ್ಮ ಮಂದಹಾಸ ಬೀರುತ್ತಾರೆ.
ವ್ಯವಹಾರದಲ್ಲಿ ಎದುರಾಗುವ ಸಣ್ಣಪುಟ್ಟ ಸವಾಲುಗಳನ್ನು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದು ಆತ್ಮವಿಶ್ವಾಸದಿಂದ ನುಡಿಯುತ್ತಾರೆ ಲಲಿತಮ್ಮ.
ಸಾಮಾನ್ಯವಾಗಿ 60ರ ನಂತರ ಅರಳು ಮರಳು ಎನ್ನುತ್ತಾರೆ. ಆದರೆ ಲಲಿತಮ್ಮನ ಜೀವನದಲ್ಲಿ 60ರ ಹರೆಯ ಮರಳಿ ಅರಳುವ ಪ್ರಾಯ. ಏಕೆಂದರೆ ಅವರಲ್ಲಿ ಜೀವನ ಪ್ರೀತಿ ಹಾಗೂ ಲವಲವಿಕೆ ನಿತ್ಯನೂತನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

12 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago