Advertisement
MIRROR FOCUS

ಧರ್ಮಸ್ಥಳ ಲಕ್ಷದೀಪೋತ್ಸವದಲ್ಲಿ ಲಲಿತಮ್ಮನ ವ್ಯವಹಾರ ಸುಲಲಿತ

Share

ಧರ್ಮಸ್ಥಳ: ಲಕ್ಷದೀಪೋತ್ಸವ ಸಂದರ್ಭದಲ್ಲಿ ಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ.

ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನುತೆರೆದವರು ಲಿತಮ್ಮ. ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ ಮೊದಲಾದ ಸತ್ವಪೂರ್ಣ ಗ್ರಾಮೀಣ ಪೌಷ್ಠಿಕ ಆಹಾರಗಳು ಇವರಲ್ಲಿ ಮಿತದರದಲ್ಲಿ ಸಿಗುತ್ತವೆ. 25 ವರ್ಷಗಳ ಹಿಂದೆ ಇವರ ಗಂಡ ನಿಧನರಾದ ಬಳಿಕ “ಕಾಯಕವೇ ಕೈಲಾಸ” ಎಂದು ನಂಬಿ ಪುಟ್ಟ ಅಂಗಡಿ ಪ್ರಾರಂಭಿಸಿದ ಇವರು ಪ್ರಾಮಾಣಿಕ ವ್ಯವಹಾರ ನಡೆಸುತ್ತಾರೆ. ಅತಿಯಾದ ಲಾಭಗಳಿಸುವ ಹಂಬಲ ಈಕೆಗಿಲ್ಲ.

ಎಲ್ಲಾಖರ್ಚು, ವೆಚ್ಚ ಕಳೆದು ದಿನಕ್ಕೆ ಇನ್ನೂರು ರೂ.ನಿವ್ವಳ ಲಾಭಗಳಿಸುತ್ತೇನೆ. ಇದರಲ್ಲೆ ತನಗೆ ತೃಪ್ತಿ, ಸಂತೋಷವಿದೆ ಎಂದು ಲಲಿತಮ್ಮ ಮಂದಹಾಸ ಬೀರುತ್ತಾರೆ.
ವ್ಯವಹಾರದಲ್ಲಿ ಎದುರಾಗುವ ಸಣ್ಣಪುಟ್ಟ ಸವಾಲುಗಳನ್ನು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದು ಆತ್ಮವಿಶ್ವಾಸದಿಂದ ನುಡಿಯುತ್ತಾರೆ ಲಲಿತಮ್ಮ.
ಸಾಮಾನ್ಯವಾಗಿ 60ರ ನಂತರ ಅರಳು ಮರಳು ಎನ್ನುತ್ತಾರೆ. ಆದರೆ ಲಲಿತಮ್ಮನ ಜೀವನದಲ್ಲಿ 60ರ ಹರೆಯ ಮರಳಿ ಅರಳುವ ಪ್ರಾಯ. ಏಕೆಂದರೆ ಅವರಲ್ಲಿ ಜೀವನ ಪ್ರೀತಿ ಹಾಗೂ ಲವಲವಿಕೆ ನಿತ್ಯನೂತನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

6 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

6 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago