ಧರ್ಮಸ್ಥಳ: ಲಕ್ಷದೀಪೋತ್ಸವ ಸಂದರ್ಭದಲ್ಲಿ ಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ.
ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನುತೆರೆದವರು ಲಿತಮ್ಮ. ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ ಮೊದಲಾದ ಸತ್ವಪೂರ್ಣ ಗ್ರಾಮೀಣ ಪೌಷ್ಠಿಕ ಆಹಾರಗಳು ಇವರಲ್ಲಿ ಮಿತದರದಲ್ಲಿ ಸಿಗುತ್ತವೆ. 25 ವರ್ಷಗಳ ಹಿಂದೆ ಇವರ ಗಂಡ ನಿಧನರಾದ ಬಳಿಕ “ಕಾಯಕವೇ ಕೈಲಾಸ” ಎಂದು ನಂಬಿ ಪುಟ್ಟ ಅಂಗಡಿ ಪ್ರಾರಂಭಿಸಿದ ಇವರು ಪ್ರಾಮಾಣಿಕ ವ್ಯವಹಾರ ನಡೆಸುತ್ತಾರೆ. ಅತಿಯಾದ ಲಾಭಗಳಿಸುವ ಹಂಬಲ ಈಕೆಗಿಲ್ಲ.
ಎಲ್ಲಾಖರ್ಚು, ವೆಚ್ಚ ಕಳೆದು ದಿನಕ್ಕೆ ಇನ್ನೂರು ರೂ.ನಿವ್ವಳ ಲಾಭಗಳಿಸುತ್ತೇನೆ. ಇದರಲ್ಲೆ ತನಗೆ ತೃಪ್ತಿ, ಸಂತೋಷವಿದೆ ಎಂದು ಲಲಿತಮ್ಮ ಮಂದಹಾಸ ಬೀರುತ್ತಾರೆ.
ವ್ಯವಹಾರದಲ್ಲಿ ಎದುರಾಗುವ ಸಣ್ಣಪುಟ್ಟ ಸವಾಲುಗಳನ್ನು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದು ಆತ್ಮವಿಶ್ವಾಸದಿಂದ ನುಡಿಯುತ್ತಾರೆ ಲಲಿತಮ್ಮ.
ಸಾಮಾನ್ಯವಾಗಿ 60ರ ನಂತರ ಅರಳು ಮರಳು ಎನ್ನುತ್ತಾರೆ. ಆದರೆ ಲಲಿತಮ್ಮನ ಜೀವನದಲ್ಲಿ 60ರ ಹರೆಯ ಮರಳಿ ಅರಳುವ ಪ್ರಾಯ. ಏಕೆಂದರೆ ಅವರಲ್ಲಿ ಜೀವನ ಪ್ರೀತಿ ಹಾಗೂ ಲವಲವಿಕೆ ನಿತ್ಯನೂತನವಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…