ಧರ್ಮಸ್ಥಳ: ಲಕ್ಷದೀಪೋತ್ಸವ ಸಂದರ್ಭದಲ್ಲಿ ಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ.
ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನುತೆರೆದವರು ಲಿತಮ್ಮ. ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ ಮೊದಲಾದ ಸತ್ವಪೂರ್ಣ ಗ್ರಾಮೀಣ ಪೌಷ್ಠಿಕ ಆಹಾರಗಳು ಇವರಲ್ಲಿ ಮಿತದರದಲ್ಲಿ ಸಿಗುತ್ತವೆ. 25 ವರ್ಷಗಳ ಹಿಂದೆ ಇವರ ಗಂಡ ನಿಧನರಾದ ಬಳಿಕ “ಕಾಯಕವೇ ಕೈಲಾಸ” ಎಂದು ನಂಬಿ ಪುಟ್ಟ ಅಂಗಡಿ ಪ್ರಾರಂಭಿಸಿದ ಇವರು ಪ್ರಾಮಾಣಿಕ ವ್ಯವಹಾರ ನಡೆಸುತ್ತಾರೆ. ಅತಿಯಾದ ಲಾಭಗಳಿಸುವ ಹಂಬಲ ಈಕೆಗಿಲ್ಲ.
ಎಲ್ಲಾಖರ್ಚು, ವೆಚ್ಚ ಕಳೆದು ದಿನಕ್ಕೆ ಇನ್ನೂರು ರೂ.ನಿವ್ವಳ ಲಾಭಗಳಿಸುತ್ತೇನೆ. ಇದರಲ್ಲೆ ತನಗೆ ತೃಪ್ತಿ, ಸಂತೋಷವಿದೆ ಎಂದು ಲಲಿತಮ್ಮ ಮಂದಹಾಸ ಬೀರುತ್ತಾರೆ.
ವ್ಯವಹಾರದಲ್ಲಿ ಎದುರಾಗುವ ಸಣ್ಣಪುಟ್ಟ ಸವಾಲುಗಳನ್ನು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದು ಆತ್ಮವಿಶ್ವಾಸದಿಂದ ನುಡಿಯುತ್ತಾರೆ ಲಲಿತಮ್ಮ.
ಸಾಮಾನ್ಯವಾಗಿ 60ರ ನಂತರ ಅರಳು ಮರಳು ಎನ್ನುತ್ತಾರೆ. ಆದರೆ ಲಲಿತಮ್ಮನ ಜೀವನದಲ್ಲಿ 60ರ ಹರೆಯ ಮರಳಿ ಅರಳುವ ಪ್ರಾಯ. ಏಕೆಂದರೆ ಅವರಲ್ಲಿ ಜೀವನ ಪ್ರೀತಿ ಹಾಗೂ ಲವಲವಿಕೆ ನಿತ್ಯನೂತನವಾಗಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…