ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘನೆಯ ಕಾರಣದಿಂದ ಶನಿವಾರ 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದು ದಕ ಜಿಲ್ಲಾ ಪೊಲೀಸರು 73 ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಹರ್ಷ, ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿದ ಕಾರಣದಿಂದ 211 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಇದರಿಂದಾಗಿ ನಾನು ಸಂತೋಷವಾಗಿಲ್ಲ. ನೀವು ಸಂತೋಷವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲಾ ಸೂಚನೆಗಳನ್ನು ಅನುಸರಿಸಿ. ಕೊರೊನಾ ಸಾಂಕ್ರಾಮಿಕದಿಂದ ನಿಮ್ಮನ್ನು ಉಳಿಸಿ ಮತ್ತು ಇತರರಿಗೆ ಅಪಾಯವನ್ನುಂಟುಮಾಡಬೇಡಿ. ನಿಯಮಗಳನ್ನು ಜಾರಿಗೊಳಿಸಲು ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಮನೆಯಲ್ಲಿಯೇ ಇರಿ ಎಂದು ಹೇಳಿದ್ದಾರೆ.
ಲಾಕ್ಡೌನ್ ಆದೇಶ ಉಲ್ಲಂಘಿಸಿ ನಗರದಲ್ಲಿ ಶನಿವಾರ ರಸ್ತೆಗಳಿದ ಸುಮಾರು 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಹಾಗೆಯೇ ದ.ಕ.ಜಿಲ್ಲಾ ಪೊಲೀಸರು 73 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…