ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಉಂಟಾದ ಈ ಬಾರಿಯ ಚಂಡಮಾರುತ ನಿಸರ್ಗ ಮಹಾರಾಷ್ಟ್ರದ ಮುಂಬೈ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿ ಅಪಾಯದಿಂದ ಪಾರಾಗಿದೆ. ಆದರೆ ಈ ಚಂಡಮಾರುತ ಇನ್ನೊಂದು ಶುಭ ಸುದ್ದಿಯನ್ನೂ ನೀಡಿದೆ. ಇದು ಪರಿಶುದ್ಧವಾದ ಗಾಳಿ. ಇದಕ್ಕೆ ಕಾರಣ ಲಾಕ್ಡೌನ್. ಅಂದರೆ ಪರಿಸರ ಮಾಲಿನ್ಯದಿಂದ ಬಹುಪಾಲು ಮುಕ್ತಿ.
ಪರಿಸರ ಮಾಲಿನ್ಯ ಅಥವಾ ಗಾಳಿಯ ಶುದ್ಧತೆಯನ್ನು ಆಗಾಗ ಪರಿಶೀಲನೆ ಮಾಡಲಾಗುತ್ತದೆ. ಆದರೆ ಪ್ರತೀ ಬಾರಿ ಚಂಡಮಾರುತ ಹಾಗೂ ಭಾರೀ ಗಾಳಿ ಬಂದಾಗ ವಾಯು ಶುದ್ಧತೆಯನ್ನು ಅಥವಾ ವಾಯು ಗುಣಮಟ್ಟದ ಸೂಚ್ಯಂಕ (AQI) ಪರಿಶೀಲನೆ ಮಾಡಲಾಗುತ್ತದೆ. ಈ ಬಾರಿಯ ನಿಸರ್ಗ ಚಂಡಮಾರುತದ ಬಳಿಕ ಪರಿಶೀಲನೆ ಮಾಡಿದಾಗ ವಾಯು ಗುಣಮಟ್ಟದ ಸೂಚ್ಯಂಕ (ಎಕ್ಯೂಐ) 22 ಕ್ಕೆ ದಾಖಲಾಗಿದ್ದು ಇದು ಇತ್ತೀಚೆಗಿನ ವರದಿಯ ಪ್ರಕಾರ ಗಾಳಿಯ ಶುದ್ಧತೆ ಉತ್ತಮ ಗುಣಮಟ್ಟದ ವ್ಯಾಪ್ತಿಗೆ ಒಳಪಟ್ಟಿದೆ ಹಾಗೂ ಇದು ಈ ವರ್ಷದ ಅತ್ಯಂತ ಉತ್ತಮ ದಾಖಲಾತಿ ಎಂದು ಸಿಸ್ಟಂ ಆಫ್ ಏರ್ ಕ್ವಾಲಿಟಿ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (SAFAR) ಹೇಳಿದೆ.
ಸ್ವಚ್ಛವಾದ ಗಾಳಿಯು ಈಗ ಸಿಗುವಂತಾಗಿದೆ. ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಾಗಿರುವುದು ಇದರ ಸಂಕೇತವಾಗಿದೆ. ವಾಯುಸಾಂದ್ರತೆ ಈ ಹಿಂದೆ 60 ಮೈಕ್ರೊಗ್ರಾಂಗಳಷ್ಟುಇದ್ದರೆ ಈಗ ತೀರಾ ಇಳಿಕೆಯಾಗಿದ್ದು 22 ಮೈಕ್ರೊಗ್ರಾಂಗಳಷ್ಟು ದಾಖಲಾಗಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…