ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಉಂಟಾದ ಈ ಬಾರಿಯ ಚಂಡಮಾರುತ ನಿಸರ್ಗ ಮಹಾರಾಷ್ಟ್ರದ ಮುಂಬೈ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿ ಅಪಾಯದಿಂದ ಪಾರಾಗಿದೆ. ಆದರೆ ಈ ಚಂಡಮಾರುತ ಇನ್ನೊಂದು ಶುಭ ಸುದ್ದಿಯನ್ನೂ ನೀಡಿದೆ. ಇದು ಪರಿಶುದ್ಧವಾದ ಗಾಳಿ. ಇದಕ್ಕೆ ಕಾರಣ ಲಾಕ್ಡೌನ್. ಅಂದರೆ ಪರಿಸರ ಮಾಲಿನ್ಯದಿಂದ ಬಹುಪಾಲು ಮುಕ್ತಿ.
ಪರಿಸರ ಮಾಲಿನ್ಯ ಅಥವಾ ಗಾಳಿಯ ಶುದ್ಧತೆಯನ್ನು ಆಗಾಗ ಪರಿಶೀಲನೆ ಮಾಡಲಾಗುತ್ತದೆ. ಆದರೆ ಪ್ರತೀ ಬಾರಿ ಚಂಡಮಾರುತ ಹಾಗೂ ಭಾರೀ ಗಾಳಿ ಬಂದಾಗ ವಾಯು ಶುದ್ಧತೆಯನ್ನು ಅಥವಾ ವಾಯು ಗುಣಮಟ್ಟದ ಸೂಚ್ಯಂಕ (AQI) ಪರಿಶೀಲನೆ ಮಾಡಲಾಗುತ್ತದೆ. ಈ ಬಾರಿಯ ನಿಸರ್ಗ ಚಂಡಮಾರುತದ ಬಳಿಕ ಪರಿಶೀಲನೆ ಮಾಡಿದಾಗ ವಾಯು ಗುಣಮಟ್ಟದ ಸೂಚ್ಯಂಕ (ಎಕ್ಯೂಐ) 22 ಕ್ಕೆ ದಾಖಲಾಗಿದ್ದು ಇದು ಇತ್ತೀಚೆಗಿನ ವರದಿಯ ಪ್ರಕಾರ ಗಾಳಿಯ ಶುದ್ಧತೆ ಉತ್ತಮ ಗುಣಮಟ್ಟದ ವ್ಯಾಪ್ತಿಗೆ ಒಳಪಟ್ಟಿದೆ ಹಾಗೂ ಇದು ಈ ವರ್ಷದ ಅತ್ಯಂತ ಉತ್ತಮ ದಾಖಲಾತಿ ಎಂದು ಸಿಸ್ಟಂ ಆಫ್ ಏರ್ ಕ್ವಾಲಿಟಿ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (SAFAR) ಹೇಳಿದೆ.
ಸ್ವಚ್ಛವಾದ ಗಾಳಿಯು ಈಗ ಸಿಗುವಂತಾಗಿದೆ. ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಾಗಿರುವುದು ಇದರ ಸಂಕೇತವಾಗಿದೆ. ವಾಯುಸಾಂದ್ರತೆ ಈ ಹಿಂದೆ 60 ಮೈಕ್ರೊಗ್ರಾಂಗಳಷ್ಟುಇದ್ದರೆ ಈಗ ತೀರಾ ಇಳಿಕೆಯಾಗಿದ್ದು 22 ಮೈಕ್ರೊಗ್ರಾಂಗಳಷ್ಟು ದಾಖಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…