ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಉಂಟಾದ ಈ ಬಾರಿಯ ಚಂಡಮಾರುತ ನಿಸರ್ಗ ಮಹಾರಾಷ್ಟ್ರದ ಮುಂಬೈ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿ ಅಪಾಯದಿಂದ ಪಾರಾಗಿದೆ. ಆದರೆ ಈ ಚಂಡಮಾರುತ ಇನ್ನೊಂದು ಶುಭ ಸುದ್ದಿಯನ್ನೂ ನೀಡಿದೆ. ಇದು ಪರಿಶುದ್ಧವಾದ ಗಾಳಿ. ಇದಕ್ಕೆ ಕಾರಣ ಲಾಕ್ಡೌನ್. ಅಂದರೆ ಪರಿಸರ ಮಾಲಿನ್ಯದಿಂದ ಬಹುಪಾಲು ಮುಕ್ತಿ.
ಪರಿಸರ ಮಾಲಿನ್ಯ ಅಥವಾ ಗಾಳಿಯ ಶುದ್ಧತೆಯನ್ನು ಆಗಾಗ ಪರಿಶೀಲನೆ ಮಾಡಲಾಗುತ್ತದೆ. ಆದರೆ ಪ್ರತೀ ಬಾರಿ ಚಂಡಮಾರುತ ಹಾಗೂ ಭಾರೀ ಗಾಳಿ ಬಂದಾಗ ವಾಯು ಶುದ್ಧತೆಯನ್ನು ಅಥವಾ ವಾಯು ಗುಣಮಟ್ಟದ ಸೂಚ್ಯಂಕ (AQI) ಪರಿಶೀಲನೆ ಮಾಡಲಾಗುತ್ತದೆ. ಈ ಬಾರಿಯ ನಿಸರ್ಗ ಚಂಡಮಾರುತದ ಬಳಿಕ ಪರಿಶೀಲನೆ ಮಾಡಿದಾಗ ವಾಯು ಗುಣಮಟ್ಟದ ಸೂಚ್ಯಂಕ (ಎಕ್ಯೂಐ) 22 ಕ್ಕೆ ದಾಖಲಾಗಿದ್ದು ಇದು ಇತ್ತೀಚೆಗಿನ ವರದಿಯ ಪ್ರಕಾರ ಗಾಳಿಯ ಶುದ್ಧತೆ ಉತ್ತಮ ಗುಣಮಟ್ಟದ ವ್ಯಾಪ್ತಿಗೆ ಒಳಪಟ್ಟಿದೆ ಹಾಗೂ ಇದು ಈ ವರ್ಷದ ಅತ್ಯಂತ ಉತ್ತಮ ದಾಖಲಾತಿ ಎಂದು ಸಿಸ್ಟಂ ಆಫ್ ಏರ್ ಕ್ವಾಲಿಟಿ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (SAFAR) ಹೇಳಿದೆ.
ಸ್ವಚ್ಛವಾದ ಗಾಳಿಯು ಈಗ ಸಿಗುವಂತಾಗಿದೆ. ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಾಗಿರುವುದು ಇದರ ಸಂಕೇತವಾಗಿದೆ. ವಾಯುಸಾಂದ್ರತೆ ಈ ಹಿಂದೆ 60 ಮೈಕ್ರೊಗ್ರಾಂಗಳಷ್ಟುಇದ್ದರೆ ಈಗ ತೀರಾ ಇಳಿಕೆಯಾಗಿದ್ದು 22 ಮೈಕ್ರೊಗ್ರಾಂಗಳಷ್ಟು ದಾಖಲಾಗಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…