ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಉಂಟಾದ ಈ ಬಾರಿಯ ಚಂಡಮಾರುತ ನಿಸರ್ಗ ಮಹಾರಾಷ್ಟ್ರದ ಮುಂಬೈ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿ ಅಪಾಯದಿಂದ ಪಾರಾಗಿದೆ. ಆದರೆ ಈ ಚಂಡಮಾರುತ ಇನ್ನೊಂದು ಶುಭ ಸುದ್ದಿಯನ್ನೂ ನೀಡಿದೆ. ಇದು ಪರಿಶುದ್ಧವಾದ ಗಾಳಿ. ಇದಕ್ಕೆ ಕಾರಣ ಲಾಕ್ಡೌನ್. ಅಂದರೆ ಪರಿಸರ ಮಾಲಿನ್ಯದಿಂದ ಬಹುಪಾಲು ಮುಕ್ತಿ.
ಪರಿಸರ ಮಾಲಿನ್ಯ ಅಥವಾ ಗಾಳಿಯ ಶುದ್ಧತೆಯನ್ನು ಆಗಾಗ ಪರಿಶೀಲನೆ ಮಾಡಲಾಗುತ್ತದೆ. ಆದರೆ ಪ್ರತೀ ಬಾರಿ ಚಂಡಮಾರುತ ಹಾಗೂ ಭಾರೀ ಗಾಳಿ ಬಂದಾಗ ವಾಯು ಶುದ್ಧತೆಯನ್ನು ಅಥವಾ ವಾಯು ಗುಣಮಟ್ಟದ ಸೂಚ್ಯಂಕ (AQI) ಪರಿಶೀಲನೆ ಮಾಡಲಾಗುತ್ತದೆ. ಈ ಬಾರಿಯ ನಿಸರ್ಗ ಚಂಡಮಾರುತದ ಬಳಿಕ ಪರಿಶೀಲನೆ ಮಾಡಿದಾಗ ವಾಯು ಗುಣಮಟ್ಟದ ಸೂಚ್ಯಂಕ (ಎಕ್ಯೂಐ) 22 ಕ್ಕೆ ದಾಖಲಾಗಿದ್ದು ಇದು ಇತ್ತೀಚೆಗಿನ ವರದಿಯ ಪ್ರಕಾರ ಗಾಳಿಯ ಶುದ್ಧತೆ ಉತ್ತಮ ಗುಣಮಟ್ಟದ ವ್ಯಾಪ್ತಿಗೆ ಒಳಪಟ್ಟಿದೆ ಹಾಗೂ ಇದು ಈ ವರ್ಷದ ಅತ್ಯಂತ ಉತ್ತಮ ದಾಖಲಾತಿ ಎಂದು ಸಿಸ್ಟಂ ಆಫ್ ಏರ್ ಕ್ವಾಲಿಟಿ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (SAFAR) ಹೇಳಿದೆ.
ಸ್ವಚ್ಛವಾದ ಗಾಳಿಯು ಈಗ ಸಿಗುವಂತಾಗಿದೆ. ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಾಗಿರುವುದು ಇದರ ಸಂಕೇತವಾಗಿದೆ. ವಾಯುಸಾಂದ್ರತೆ ಈ ಹಿಂದೆ 60 ಮೈಕ್ರೊಗ್ರಾಂಗಳಷ್ಟುಇದ್ದರೆ ಈಗ ತೀರಾ ಇಳಿಕೆಯಾಗಿದ್ದು 22 ಮೈಕ್ರೊಗ್ರಾಂಗಳಷ್ಟು ದಾಖಲಾಗಿದೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…