Advertisement
ರಾಷ್ಟ್ರೀಯ

ಲಾಕ್ಡೌನ್ ಪರಿಣಾಮ – ಭಾರತ ಸೇಫ್ | ಜಗತ್ತಿನಲ್ಲಿ ಭಾರತ 16 ನೇ ಸ್ಥಾನದಲ್ಲಿದೆ | ದೇಶದ 78 ಜಿಲ್ಲೆಗಳಲ್ಲಿ ಕೊರೊನಾ ನೆಗೆಟಿವ್ |

Share

ನವದೆಹಲಿ: ಭಾರತದಲ್ಲಿ ಲಾಕ್ಡೌನ್  ಮಾಡಿರುವ ಪರಿಣಾಮ ಸುರಕ್ಷಿತವಾಗಿದೆ. ಇದರ ನಿಯಮ ಇನ್ನಷ್ಟು ಪಾಲನೆಯಾಗಬೇಕು, ಕೊರೊನಾ ಮುಕ್ತ ದೇಶವಾಗಲು ಎಲ್ಲರ ಸಹಕಾರ ಬೇಕಿದೆ. ಈಗಾಗಲೇ ಲಾಕ್ಡೌನ್ ಪರಿಣಾಮಕಾರಿಯಾಗಿದೆ ಎಂದು ಭಾರತ ಸರಕಾರದ ಆರೋಗ್ಯ ಸಚಿವಾಲಯ ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವಾಲಯ,  ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ರೋಗವು ದ್ವಿಗುಣಗೊಳ್ಳುವ ದರ ಪ್ರಸ್ತುತ 9 ದಿನಗಳಾಗಿವೆ, ಕಳೆದ 14  ದಿನಗಳಿಂದ ದೇಶದ 78 ಜಿಲ್ಲೆಗಳಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಇದರಲ್ಲಿ 15 ಜಿಲ್ಲೆಗಳಲ್ಲಿ ಕಳೆದ 28 ದಿನಗಳಲ್ಲಿ ಒಂದೂ ಕೊರೊನಾ ಪ್ರಕರಣ ದಾಖಲಾಗಿಲ್ಲ.ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ. 20ರಷ್ಟಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1752 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ 23,452 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 491 ರೋಗಿಗಳು ಗುಣಮುಖರಾಗಿದ್ದಾರೆ. ಈ ಮೂಲಕ ಗುಣಮುಖರಾದರು ಸಂಖ್ಯೆ 4, 813  ಗಡಿಯನ್ನು ದಾಟಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಈವರೆಗೆ ಕೊರೊನಾದಿಂದ ಮೃತ ಪಟ್ಟವರ ಸಂಖ್ಯೆ 723 ಕ್ಕೆ ಏರಿದೆ.

ಎಲ್ಲಾ ರಾಜ್ಯ ಸರಕಾರಗಳು ಸಾಂಕ್ರಾಮಿಕ ರೋಗ ಹೆಚ್ಚಿರುವ ಅಥವಾ ಸೋಂಕಿನ ಸಂಖ್ಯೆ ಅತಿ ವೇಗದಲ್ಲಿ ದ್ವಿಗುಣಗೊಳ್ಳುತ್ತಿರುವ ಜಿಲ್ಲೆಗಳತ್ತ ಹೆಚ್ಚಿನ ಗಮನವನ್ನು ನೀಡಬೇಕಾಗಿದೆ ಎಂದು ಸಚಿವಾಲಯ ಹೇಳಿದೆ.

ಭಾತದಲ್ಲಿ  ಸಾವಿನ ಸಂಖ್ಯೆ 723 ಕ್ಕೆ ಏರಿಕೆಯಾದರೆ ವಿಶ್ವಾದ್ಯಂತ 1.9 ಲಕ್ಷ ಮಂದಿ ಮೃತಪಟ್ಟಿದ್ದಾರೆ.ಜಾಗತಿಕ ಲೆಕ್ಕಾಚಾರದಲ್ಲಿ ಭಾರತ 16 ನೇ ಸ್ಥಾನದಲ್ಲಿದೆ. ವಿಶ್ವಾದ್ಯಂತ 27 ಲಕ್ಷ ಜನರಿಗೆ ಸೋಂಕು ತಗುಲಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚುಮಂದಿ ಮೃತಪಟ್ಟಿದ್ದಾರೆ.  ಈ ಮೂರು ರಾಜ್ಯಗಳಲ್ಲೇ 478 ಜನರು ಮೃತಪಟ್ಟಿದ್ಧಾರೆ.

ಇದೇ ವೇಳೆ ವಿಶ್ವದ ದೊಡ್ಡಣ್ಣ ಅಮೇರಿಕಾದಲ್ಲಿ 50,031 ಜನರು ಕೊರೊನಾಗೆ ಬಲಿಯಾಗಿದ್ದಾರೆ, 8,70,000 ಪ್ರಕರಣಗಳು ಖಚಿತಗೊಂಡಿವೆ. ಈಗ ಅಮೇರಿಕಾ ಕೊರೊನಾ ಬಿಕ್ಕಟ್ಟು ಎದುರಿಸುತ್ತಿದೆ, ದೇಶವನ್ನು ಸುರಕ್ಷಿತಗೊಳಿಸಲು ಹರಸಾಹಸ ಪಡುತ್ತಿದೆ.  ಪ್ರತೀ ದಿನ ಸುಮಾರು 2 ಸಾವಿರ ಮಂದಿ ಮೃತಪಡುತ್ತಿದ್ದಾರೆ.ಈಗ ಅಮೇರಿಕಾದಲ್ಲಿ ಆಸ್ಪತ್ರೆಯಲ್ಲಿ  ಮೃತಪಟ್ಟವರ ವರದಿಗಳು ಮಾತ್ರಾ ಲಭ್ಯವಾಗುತ್ತಿದ್ದು ಮನೆಗಳಲ್ಲಿ ಮೃತಪಟ್ಟವರ ಸಂಖ್ಯೆ ಲಭ್ಯವಾಗುತ್ತಿಲ್ಲ ಎಂದು ಸುದ್ದಿಸಂಸ್ಥೆ ವರದಿ ಮಾಡಿವೆ.ನೂಯಾರ್ಕ್​ನಲ್ಲಿ ಶೇ.40ರಷ್ಟು ಸಾವುಗಳು ಸಂಭವಿಸಿದೆ, ನ್ಯೂಜೆರ್ಸಿ, ಮಿಚಿಗನ್ ಹಾಗೂ ಮ್ಯಾಸಚೂಸೆಟ್ಸ್​ನಲ್ಲಿ ಹೆಚ್ಚು ಸಾವು ಸಂಭವಿಸಿದೆ ಎಂದು ವರದಿಯಲ್ಲಿ  ಹೇಳಲಾಗಿದೆ. ಈ ಎಲ್ಲದರ ನಡುವೆಯೂ ಕೆಲವು ಪ್ರದೇಶಗಳಲ್ಲಿ  ಲಾಕ್ಡೌನ್ ಸಡಿಲ ಮಾಡಿದೆ.

 

 

 
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

3 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

3 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

9 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

15 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago