ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಡಿಲಿಕೆ ಮಾಡುವ ಬಗ್ಗೆ ಸಭೆ ನಡೆಸಿ ಜಿಲ್ಲೆಯ ಸ್ಥಿತಿಗತಿ ಗಮನಿಸಿದ ಬಳಿಕವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹಾಟ್ ಸ್ಫಾಟ್ ಅಥವಾ ರೆಡ್ ಝೋನ್ ವಲಯದಲ್ಲಿ ಇರುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ವಸ್ತುಸ್ಥಿತಿ ತಿಳಿಯಬೇಕಿದೆ.ಇಲ್ಲಿ ಈಗಾಗಲೇ ಕಂಟೈನ್ಮೆಂಟ್ ವಲಯ ಮಾಡಲಾಗಿದೆ ಇದೆಲ್ಲಾ ಗಮನಿಸಿದ ಬಳಿಕವೇ ಕ್ರಮ ಕೈಗೊಳ್ಳಲಾಗುತ್ತದೆ , ಹೀಗಾಗಿ ಎ.23 ರಂದು ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಾಗುವುದು. ಸಭೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲಾಡಳಿತವು ಲಾಕ್ಡೌನ್ ಸಡಿಲಿಕೆ ನಿಯಮದ ಬಗ್ಗೆ ಅಧಿಕೃತ ಆದೇಶ ಹೊರಡಿಸದ ಹೊರತು ಲಾಕ್ಡೌನ್ ಉಲ್ಲಂಘನೆ ಮಾಡುವಂತಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…