Advertisement
ರಾಷ್ಟ್ರೀಯ

ಲಾಕ್ಡೌನ್ 4.0 ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ | ಮೇ.18 ಕ್ಕೆ ಮೊದಲು ಹೊಸ ಮಾರ್ಗಸೂಚಿ | 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ |

Share

ನವದೆಹಲಿ: ಭಾರತದಲ್ಲಿ ಲಾಕ್ಡೌನ್ 4.0 ಪಕ್ಕಾ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಆದರೆ,   ಹೊಸ ರೂಪು ರೇಷೆಗಳಿಂದ ಸುಧಾರಿತವಾಗಿರಲಿದೆ  ಎಂದು ತಿಳಿಸಿದ್ದಾರೆ. ಮೇ.18 ಕ್ಕೂ ಮೊದಲು ಹೊಸ ಮಾರ್ಗಸೂಚಿಗಳನ್ನು ಘೋಷಿಸುವುದಾಗಿ ಘೋಷಣೆ ಮಾಡಿದ್ದಾರೆ.

Advertisement

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ವಿರುದ್ಧ ಸಕಾರಾತ್ಮಕವಾಗಿ ಹೋರಾಡಿದಲ್ಲಿ ಮಾತ್ರ ಕೊರೊನಾ ವೈರಸ್ ವಿರುದ್ಧ ಜಯ ಗಳಿಸಲು ಸಾಧ್ಯವಾಗುತ್ತದೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಹಲವು ರಾಷ್ಟ್ರಗಳು ವಿಫಲವಾಗಿದೆ, ಭಾರತವು ಎಲ್ಲರ ಸಹಕಾರದಿಂದ ಇದುವರೆಗೆ ಯಶಸ್ಸು ಕಂಡಿದೆ ಎಂದ ಪ್ರಧಾನಿಗಳು  ದೇಶದ ಶ್ರಮಿಕರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರಿಗಾಗಿ  20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ದೇಶದ ಜಿಡಿಪಿಯ ಶೇ.10ರಷ್ಟು ಅನುದಾನ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.  ಭಾರತದಲ್ಲಿ ಘೋಷಣೆಯಾಗಿರುವ ಆರ್ಥಿಕ ಪ್ಯಾಕೇಜ್ ಮುಂದಿನ ದಿನಗಳಲ್ಲಿ ಎಲ್ಲ ವಲಯಗಳಿಗೆ ಪೂರಕವಾಗಲಿದ್ದು ,  ಜನ್ ಧನ್, ಆಧಾರ್ ಹಾಗೂ ಮೊಬೈಲ್ ಮೂಲಕ ನೇರವಾಗಿ ಜನರ ಖಾತೆಗೆ ಹಣ ಬೀಳಲಿದೆ ಎಂದರು. ಸ್ವದೇಶಿ ವಸ್ತುಗಳ ಉತ್ಪಾದನೆ ಪೂರೈಕೆಗೆ ಆರ್ಥಿಕ ಪ್ಯಾಕೇಜ್ ನಲ್ಲಿ ಒತ್ತು ನೀಡಲಿದೆ ಎಂದರು.

ಕೊರೊನಾ ವೈರಸ್ ಬಹಳ ಸಮಯದವರೆಗೆ ಇರುತ್ತದೆ, ಅದು ನಮ್ಮ ಜೀವನದ ಭಾಗವಾಗಲಿದೆ ಎಂದು  ವಿಜ್ಞಾನಿಗಳು ಹೇಳುತ್ತಾರೆ. ಆದರೆ ನಮ್ಮ ಜೀವನವು ಕೊರೊನಾ ಸುತ್ತಲೂ ಸೀಮಿತವಾಗಿರಲು ಸಾಧ್ಯವಿಲ್ಲ. ನಾವು, ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ದೂರವನ್ನು ಕಾಪಾಡಿಕೊಂಡರೆ  ನಮ್ಮ ಮೇಲೆ ಪರಿಣಾಮ ಬೀರುವುದು  ದೂರ ಮಾಡಬಹುದು. ಆದ್ದರಿಂದ ಲಾಕ್ಡೌನ್ 4 ಹೊಸ ನಿಯಮಗಳೊಂದಿಗೆ ಹೊಸ ರೂಪದಲ್ಲಿರುತ್ತದೆ ಎಂದರು.

ಸ್ಥಳೀಯ ವ್ಯವಹಾರ ಉತ್ತೇಜಿಸಲು ಕರೆ :

ಭಾರತೀಯರು ಸ್ಥಳೀಯ ವ್ಯವಹಾರಗಳಿಗೆ ಉತ್ತೇಜನ ನೀಡಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದಾರೆ.  
“Indians must be vocal for local ” ಎಂಬುದು ಮಂತ್ರವಾಗಿರಲಿ ಎಂಬುದನ್ನು  ಒತ್ತಿ ಹೇಳಿದ್ದಾರೆ. ನಾವು ನಮ್ಮ ಜೀವನದ ಮಂತ್ರವನ್ನು ‘ಸ್ಥಳೀಯ’ವನ್ನಾಗಿ ಮಾಡಬೇಕು ಎಂದು ಸಮಯವು ನಮಗೆ ಕಲಿಸಿದೆ. ಇಂದು ಇರುವ ಜಾಗತಿಕ ಬ್ರ್ಯಾಂಡ್‌ಗಳು ಒಂದು ಕಾಲದಲ್ಲಿ ಸ್ಥಳೀಯವಾಗಿದ್ದವು ಆದರೆ ಅಲ್ಲಿನ ಜನರು ಅವರನ್ನು ಬೆಂಬಲಿಸಲು ಪ್ರಾರಂಭಿಸಿದಾಗ ಅವರು ಜಾಗತಿಕರಾದರು. ಅದಕ್ಕಾಗಿಯೇ ಇಂದಿನಿಂದಲೇ  ಪ್ರತಿಯೊಬ್ಬ ಭಾರತೀಯರು ನಮ್ಮ ಸ್ಥಳೀಯರಿಗೆ ಧ್ವನಿಯಾಗಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

10 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

1 day ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

1 day ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago