Advertisement
ರಾಷ್ಟ್ರೀಯ

ಲಾಕ್ಡೌನ್ 4.0 ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ | ಮೇ.18 ಕ್ಕೆ ಮೊದಲು ಹೊಸ ಮಾರ್ಗಸೂಚಿ | 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ |

Share

ನವದೆಹಲಿ: ಭಾರತದಲ್ಲಿ ಲಾಕ್ಡೌನ್ 4.0 ಪಕ್ಕಾ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಆದರೆ,   ಹೊಸ ರೂಪು ರೇಷೆಗಳಿಂದ ಸುಧಾರಿತವಾಗಿರಲಿದೆ  ಎಂದು ತಿಳಿಸಿದ್ದಾರೆ. ಮೇ.18 ಕ್ಕೂ ಮೊದಲು ಹೊಸ ಮಾರ್ಗಸೂಚಿಗಳನ್ನು ಘೋಷಿಸುವುದಾಗಿ ಘೋಷಣೆ ಮಾಡಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ವಿರುದ್ಧ ಸಕಾರಾತ್ಮಕವಾಗಿ ಹೋರಾಡಿದಲ್ಲಿ ಮಾತ್ರ ಕೊರೊನಾ ವೈರಸ್ ವಿರುದ್ಧ ಜಯ ಗಳಿಸಲು ಸಾಧ್ಯವಾಗುತ್ತದೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಹಲವು ರಾಷ್ಟ್ರಗಳು ವಿಫಲವಾಗಿದೆ, ಭಾರತವು ಎಲ್ಲರ ಸಹಕಾರದಿಂದ ಇದುವರೆಗೆ ಯಶಸ್ಸು ಕಂಡಿದೆ ಎಂದ ಪ್ರಧಾನಿಗಳು  ದೇಶದ ಶ್ರಮಿಕರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರಿಗಾಗಿ  20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ದೇಶದ ಜಿಡಿಪಿಯ ಶೇ.10ರಷ್ಟು ಅನುದಾನ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.  ಭಾರತದಲ್ಲಿ ಘೋಷಣೆಯಾಗಿರುವ ಆರ್ಥಿಕ ಪ್ಯಾಕೇಜ್ ಮುಂದಿನ ದಿನಗಳಲ್ಲಿ ಎಲ್ಲ ವಲಯಗಳಿಗೆ ಪೂರಕವಾಗಲಿದ್ದು ,  ಜನ್ ಧನ್, ಆಧಾರ್ ಹಾಗೂ ಮೊಬೈಲ್ ಮೂಲಕ ನೇರವಾಗಿ ಜನರ ಖಾತೆಗೆ ಹಣ ಬೀಳಲಿದೆ ಎಂದರು. ಸ್ವದೇಶಿ ವಸ್ತುಗಳ ಉತ್ಪಾದನೆ ಪೂರೈಕೆಗೆ ಆರ್ಥಿಕ ಪ್ಯಾಕೇಜ್ ನಲ್ಲಿ ಒತ್ತು ನೀಡಲಿದೆ ಎಂದರು.

ಕೊರೊನಾ ವೈರಸ್ ಬಹಳ ಸಮಯದವರೆಗೆ ಇರುತ್ತದೆ, ಅದು ನಮ್ಮ ಜೀವನದ ಭಾಗವಾಗಲಿದೆ ಎಂದು  ವಿಜ್ಞಾನಿಗಳು ಹೇಳುತ್ತಾರೆ. ಆದರೆ ನಮ್ಮ ಜೀವನವು ಕೊರೊನಾ ಸುತ್ತಲೂ ಸೀಮಿತವಾಗಿರಲು ಸಾಧ್ಯವಿಲ್ಲ. ನಾವು, ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ದೂರವನ್ನು ಕಾಪಾಡಿಕೊಂಡರೆ  ನಮ್ಮ ಮೇಲೆ ಪರಿಣಾಮ ಬೀರುವುದು  ದೂರ ಮಾಡಬಹುದು. ಆದ್ದರಿಂದ ಲಾಕ್ಡೌನ್ 4 ಹೊಸ ನಿಯಮಗಳೊಂದಿಗೆ ಹೊಸ ರೂಪದಲ್ಲಿರುತ್ತದೆ ಎಂದರು.

ಸ್ಥಳೀಯ ವ್ಯವಹಾರ ಉತ್ತೇಜಿಸಲು ಕರೆ :

ಭಾರತೀಯರು ಸ್ಥಳೀಯ ವ್ಯವಹಾರಗಳಿಗೆ ಉತ್ತೇಜನ ನೀಡಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದಾರೆ.  
“Indians must be vocal for local ” ಎಂಬುದು ಮಂತ್ರವಾಗಿರಲಿ ಎಂಬುದನ್ನು  ಒತ್ತಿ ಹೇಳಿದ್ದಾರೆ. ನಾವು ನಮ್ಮ ಜೀವನದ ಮಂತ್ರವನ್ನು ‘ಸ್ಥಳೀಯ’ವನ್ನಾಗಿ ಮಾಡಬೇಕು ಎಂದು ಸಮಯವು ನಮಗೆ ಕಲಿಸಿದೆ. ಇಂದು ಇರುವ ಜಾಗತಿಕ ಬ್ರ್ಯಾಂಡ್‌ಗಳು ಒಂದು ಕಾಲದಲ್ಲಿ ಸ್ಥಳೀಯವಾಗಿದ್ದವು ಆದರೆ ಅಲ್ಲಿನ ಜನರು ಅವರನ್ನು ಬೆಂಬಲಿಸಲು ಪ್ರಾರಂಭಿಸಿದಾಗ ಅವರು ಜಾಗತಿಕರಾದರು. ಅದಕ್ಕಾಗಿಯೇ ಇಂದಿನಿಂದಲೇ  ಪ್ರತಿಯೊಬ್ಬ ಭಾರತೀಯರು ನಮ್ಮ ಸ್ಥಳೀಯರಿಗೆ ಧ್ವನಿಯಾಗಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

9 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

9 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

19 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

19 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

20 hours ago