Advertisement
ರಾಷ್ಟ್ರೀಯ

ಲಾಕ್ಡೌನ್ 4.0 ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ | ಮೇ.18 ಕ್ಕೆ ಮೊದಲು ಹೊಸ ಮಾರ್ಗಸೂಚಿ | 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ |

Share

ನವದೆಹಲಿ: ಭಾರತದಲ್ಲಿ ಲಾಕ್ಡೌನ್ 4.0 ಪಕ್ಕಾ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಆದರೆ,   ಹೊಸ ರೂಪು ರೇಷೆಗಳಿಂದ ಸುಧಾರಿತವಾಗಿರಲಿದೆ  ಎಂದು ತಿಳಿಸಿದ್ದಾರೆ. ಮೇ.18 ಕ್ಕೂ ಮೊದಲು ಹೊಸ ಮಾರ್ಗಸೂಚಿಗಳನ್ನು ಘೋಷಿಸುವುದಾಗಿ ಘೋಷಣೆ ಮಾಡಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ವಿರುದ್ಧ ಸಕಾರಾತ್ಮಕವಾಗಿ ಹೋರಾಡಿದಲ್ಲಿ ಮಾತ್ರ ಕೊರೊನಾ ವೈರಸ್ ವಿರುದ್ಧ ಜಯ ಗಳಿಸಲು ಸಾಧ್ಯವಾಗುತ್ತದೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಹಲವು ರಾಷ್ಟ್ರಗಳು ವಿಫಲವಾಗಿದೆ, ಭಾರತವು ಎಲ್ಲರ ಸಹಕಾರದಿಂದ ಇದುವರೆಗೆ ಯಶಸ್ಸು ಕಂಡಿದೆ ಎಂದ ಪ್ರಧಾನಿಗಳು  ದೇಶದ ಶ್ರಮಿಕರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರಿಗಾಗಿ  20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ದೇಶದ ಜಿಡಿಪಿಯ ಶೇ.10ರಷ್ಟು ಅನುದಾನ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.  ಭಾರತದಲ್ಲಿ ಘೋಷಣೆಯಾಗಿರುವ ಆರ್ಥಿಕ ಪ್ಯಾಕೇಜ್ ಮುಂದಿನ ದಿನಗಳಲ್ಲಿ ಎಲ್ಲ ವಲಯಗಳಿಗೆ ಪೂರಕವಾಗಲಿದ್ದು ,  ಜನ್ ಧನ್, ಆಧಾರ್ ಹಾಗೂ ಮೊಬೈಲ್ ಮೂಲಕ ನೇರವಾಗಿ ಜನರ ಖಾತೆಗೆ ಹಣ ಬೀಳಲಿದೆ ಎಂದರು. ಸ್ವದೇಶಿ ವಸ್ತುಗಳ ಉತ್ಪಾದನೆ ಪೂರೈಕೆಗೆ ಆರ್ಥಿಕ ಪ್ಯಾಕೇಜ್ ನಲ್ಲಿ ಒತ್ತು ನೀಡಲಿದೆ ಎಂದರು.

ಕೊರೊನಾ ವೈರಸ್ ಬಹಳ ಸಮಯದವರೆಗೆ ಇರುತ್ತದೆ, ಅದು ನಮ್ಮ ಜೀವನದ ಭಾಗವಾಗಲಿದೆ ಎಂದು  ವಿಜ್ಞಾನಿಗಳು ಹೇಳುತ್ತಾರೆ. ಆದರೆ ನಮ್ಮ ಜೀವನವು ಕೊರೊನಾ ಸುತ್ತಲೂ ಸೀಮಿತವಾಗಿರಲು ಸಾಧ್ಯವಿಲ್ಲ. ನಾವು, ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ದೂರವನ್ನು ಕಾಪಾಡಿಕೊಂಡರೆ  ನಮ್ಮ ಮೇಲೆ ಪರಿಣಾಮ ಬೀರುವುದು  ದೂರ ಮಾಡಬಹುದು. ಆದ್ದರಿಂದ ಲಾಕ್ಡೌನ್ 4 ಹೊಸ ನಿಯಮಗಳೊಂದಿಗೆ ಹೊಸ ರೂಪದಲ್ಲಿರುತ್ತದೆ ಎಂದರು.

ಸ್ಥಳೀಯ ವ್ಯವಹಾರ ಉತ್ತೇಜಿಸಲು ಕರೆ :

ಭಾರತೀಯರು ಸ್ಥಳೀಯ ವ್ಯವಹಾರಗಳಿಗೆ ಉತ್ತೇಜನ ನೀಡಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದಾರೆ.  
“Indians must be vocal for local ” ಎಂಬುದು ಮಂತ್ರವಾಗಿರಲಿ ಎಂಬುದನ್ನು  ಒತ್ತಿ ಹೇಳಿದ್ದಾರೆ. ನಾವು ನಮ್ಮ ಜೀವನದ ಮಂತ್ರವನ್ನು ‘ಸ್ಥಳೀಯ’ವನ್ನಾಗಿ ಮಾಡಬೇಕು ಎಂದು ಸಮಯವು ನಮಗೆ ಕಲಿಸಿದೆ. ಇಂದು ಇರುವ ಜಾಗತಿಕ ಬ್ರ್ಯಾಂಡ್‌ಗಳು ಒಂದು ಕಾಲದಲ್ಲಿ ಸ್ಥಳೀಯವಾಗಿದ್ದವು ಆದರೆ ಅಲ್ಲಿನ ಜನರು ಅವರನ್ನು ಬೆಂಬಲಿಸಲು ಪ್ರಾರಂಭಿಸಿದಾಗ ಅವರು ಜಾಗತಿಕರಾದರು. ಅದಕ್ಕಾಗಿಯೇ ಇಂದಿನಿಂದಲೇ  ಪ್ರತಿಯೊಬ್ಬ ಭಾರತೀಯರು ನಮ್ಮ ಸ್ಥಳೀಯರಿಗೆ ಧ್ವನಿಯಾಗಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

9 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago