Advertisement
ರಾಷ್ಟ್ರೀಯ

ಲಾಕ್ಡೌನ್ 4.0 ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ | ಮೇ.18 ಕ್ಕೆ ಮೊದಲು ಹೊಸ ಮಾರ್ಗಸೂಚಿ | 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ |

Share

ನವದೆಹಲಿ: ಭಾರತದಲ್ಲಿ ಲಾಕ್ಡೌನ್ 4.0 ಪಕ್ಕಾ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಆದರೆ,   ಹೊಸ ರೂಪು ರೇಷೆಗಳಿಂದ ಸುಧಾರಿತವಾಗಿರಲಿದೆ  ಎಂದು ತಿಳಿಸಿದ್ದಾರೆ. ಮೇ.18 ಕ್ಕೂ ಮೊದಲು ಹೊಸ ಮಾರ್ಗಸೂಚಿಗಳನ್ನು ಘೋಷಿಸುವುದಾಗಿ ಘೋಷಣೆ ಮಾಡಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ವಿರುದ್ಧ ಸಕಾರಾತ್ಮಕವಾಗಿ ಹೋರಾಡಿದಲ್ಲಿ ಮಾತ್ರ ಕೊರೊನಾ ವೈರಸ್ ವಿರುದ್ಧ ಜಯ ಗಳಿಸಲು ಸಾಧ್ಯವಾಗುತ್ತದೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಹಲವು ರಾಷ್ಟ್ರಗಳು ವಿಫಲವಾಗಿದೆ, ಭಾರತವು ಎಲ್ಲರ ಸಹಕಾರದಿಂದ ಇದುವರೆಗೆ ಯಶಸ್ಸು ಕಂಡಿದೆ ಎಂದ ಪ್ರಧಾನಿಗಳು  ದೇಶದ ಶ್ರಮಿಕರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರಿಗಾಗಿ  20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ದೇಶದ ಜಿಡಿಪಿಯ ಶೇ.10ರಷ್ಟು ಅನುದಾನ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.  ಭಾರತದಲ್ಲಿ ಘೋಷಣೆಯಾಗಿರುವ ಆರ್ಥಿಕ ಪ್ಯಾಕೇಜ್ ಮುಂದಿನ ದಿನಗಳಲ್ಲಿ ಎಲ್ಲ ವಲಯಗಳಿಗೆ ಪೂರಕವಾಗಲಿದ್ದು ,  ಜನ್ ಧನ್, ಆಧಾರ್ ಹಾಗೂ ಮೊಬೈಲ್ ಮೂಲಕ ನೇರವಾಗಿ ಜನರ ಖಾತೆಗೆ ಹಣ ಬೀಳಲಿದೆ ಎಂದರು. ಸ್ವದೇಶಿ ವಸ್ತುಗಳ ಉತ್ಪಾದನೆ ಪೂರೈಕೆಗೆ ಆರ್ಥಿಕ ಪ್ಯಾಕೇಜ್ ನಲ್ಲಿ ಒತ್ತು ನೀಡಲಿದೆ ಎಂದರು.

ಕೊರೊನಾ ವೈರಸ್ ಬಹಳ ಸಮಯದವರೆಗೆ ಇರುತ್ತದೆ, ಅದು ನಮ್ಮ ಜೀವನದ ಭಾಗವಾಗಲಿದೆ ಎಂದು  ವಿಜ್ಞಾನಿಗಳು ಹೇಳುತ್ತಾರೆ. ಆದರೆ ನಮ್ಮ ಜೀವನವು ಕೊರೊನಾ ಸುತ್ತಲೂ ಸೀಮಿತವಾಗಿರಲು ಸಾಧ್ಯವಿಲ್ಲ. ನಾವು, ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ದೂರವನ್ನು ಕಾಪಾಡಿಕೊಂಡರೆ  ನಮ್ಮ ಮೇಲೆ ಪರಿಣಾಮ ಬೀರುವುದು  ದೂರ ಮಾಡಬಹುದು. ಆದ್ದರಿಂದ ಲಾಕ್ಡೌನ್ 4 ಹೊಸ ನಿಯಮಗಳೊಂದಿಗೆ ಹೊಸ ರೂಪದಲ್ಲಿರುತ್ತದೆ ಎಂದರು.

ಸ್ಥಳೀಯ ವ್ಯವಹಾರ ಉತ್ತೇಜಿಸಲು ಕರೆ :

ಭಾರತೀಯರು ಸ್ಥಳೀಯ ವ್ಯವಹಾರಗಳಿಗೆ ಉತ್ತೇಜನ ನೀಡಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದಾರೆ.  
“Indians must be vocal for local ” ಎಂಬುದು ಮಂತ್ರವಾಗಿರಲಿ ಎಂಬುದನ್ನು  ಒತ್ತಿ ಹೇಳಿದ್ದಾರೆ. ನಾವು ನಮ್ಮ ಜೀವನದ ಮಂತ್ರವನ್ನು ‘ಸ್ಥಳೀಯ’ವನ್ನಾಗಿ ಮಾಡಬೇಕು ಎಂದು ಸಮಯವು ನಮಗೆ ಕಲಿಸಿದೆ. ಇಂದು ಇರುವ ಜಾಗತಿಕ ಬ್ರ್ಯಾಂಡ್‌ಗಳು ಒಂದು ಕಾಲದಲ್ಲಿ ಸ್ಥಳೀಯವಾಗಿದ್ದವು ಆದರೆ ಅಲ್ಲಿನ ಜನರು ಅವರನ್ನು ಬೆಂಬಲಿಸಲು ಪ್ರಾರಂಭಿಸಿದಾಗ ಅವರು ಜಾಗತಿಕರಾದರು. ಅದಕ್ಕಾಗಿಯೇ ಇಂದಿನಿಂದಲೇ  ಪ್ರತಿಯೊಬ್ಬ ಭಾರತೀಯರು ನಮ್ಮ ಸ್ಥಳೀಯರಿಗೆ ಧ್ವನಿಯಾಗಬೇಕು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

21 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

22 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

22 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 days ago