Advertisement
ಸುದ್ದಿಗಳು

ಲಾಕ್‌ಡೌನ್ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಶಾಸಕ ಅಂಗಾರ ಸೂಚನೆ

Share

ಸುಳ್ಯ: ಕೋವಿಡ್ 19 ಹಡುವುದನ್ನು ನಿಯಂತ್ರಿಸುವ ಸಲುವಾಗಿ ಜುಲೈ15ರಿಂದ 22 ರವರೆಗೆ ಒಂದು ವಾರದ ಕಾಲ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಅವರು ತಾಲೂಕಿನ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಲಾಕ್‌ಡೌನ್ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಎಲ್ಲಾ ಕ್ರಮಗಳನ್ನೂ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳಿಗೆ ಜನರು ಸಹಕಾರ ನೀಡುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಇಂದು ಮತ್ತು ನಾಳೆ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕದ ಮೂಲಕ ಜನರಲ್ಲಿ ಲಾಕ್‌ಡೌನ್ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು. ಎರಡು ದಿನಗಳಲ್ಲಿ ಜನರು ದಿನಬಳಕೆಯ ಅಗತ್ಯ ವಸ್ತುಗಳ ಖರೀದಿ ನಡೆಸಬೇಕು. ಇದಕ್ಕೆ ತೊಂದರೆಯಾಗದಂತೆ ಪ್ರತೀ ಪಂಚಾಯತ್ ಅಧಿಕಾರಿಗಳು ನಿಗಾ ವಹಿಸುವಂತೆ ಸೂಚಿಸಬೇಕು ಎಂದು ಇ.ಒ.ಅವರಿಗೆ ಶಾಸಕರು ತಿಳಿಸಿದರು.

ಒಂದು ವಾರಗಳ ಕಾಲ ಇರುವ ಲಾಕ್‌ಡೌನ್ ಮಾರ್ಗಸೂಚಿಯನ್ನು ಜಿಲ್ಲಾಡಳಿತ ಪ್ರಕಟಿಸಲಿದ್ದು ಕಾನೂನು ಮೀರಿದರೆ ಅಂತವರ ಮೇಲೆ ಕಠಿಣ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಶಾಸಕರು ಸೂಚಿಸಿದರು. ಜನರ ಆರೋಗ್ಯದ ದೃಷ್ಠಿಯಿಂದ ಲಾಕ್‌ಡೌನ್ ನಿರ್ಧಾರವನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ. ಜನರು ಮನೆಯಿಂದ ಹೊರ ಬಾರದೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ವಿನಂತಿಸಿದರು.

ಸಭೆಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ನ.ಪಂ.ಸದಸ್ಯ ವಿನಯ ಕಂದಡ್ಕ, ತಹಶೀಲ್ದಾರ್ ಅನಂತಶAಕರ, ಪೊಲೀಸ್ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ನ.ಪಂ.ಮುಖ್ಯಾಧಿಕಾರಿ ಮತ್ತಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಆರ್.ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

4 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

5 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

7 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

7 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

18 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago