Advertisement
ಸುದ್ದಿಗಳು

ಲಾಕ್‌ಡೌನ್ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಶಾಸಕ ಅಂಗಾರ ಸೂಚನೆ

Share

ಸುಳ್ಯ: ಕೋವಿಡ್ 19 ಹಡುವುದನ್ನು ನಿಯಂತ್ರಿಸುವ ಸಲುವಾಗಿ ಜುಲೈ15ರಿಂದ 22 ರವರೆಗೆ ಒಂದು ವಾರದ ಕಾಲ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಅವರು ತಾಲೂಕಿನ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಲಾಕ್‌ಡೌನ್ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಎಲ್ಲಾ ಕ್ರಮಗಳನ್ನೂ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳಿಗೆ ಜನರು ಸಹಕಾರ ನೀಡುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಇಂದು ಮತ್ತು ನಾಳೆ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕದ ಮೂಲಕ ಜನರಲ್ಲಿ ಲಾಕ್‌ಡೌನ್ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು. ಎರಡು ದಿನಗಳಲ್ಲಿ ಜನರು ದಿನಬಳಕೆಯ ಅಗತ್ಯ ವಸ್ತುಗಳ ಖರೀದಿ ನಡೆಸಬೇಕು. ಇದಕ್ಕೆ ತೊಂದರೆಯಾಗದಂತೆ ಪ್ರತೀ ಪಂಚಾಯತ್ ಅಧಿಕಾರಿಗಳು ನಿಗಾ ವಹಿಸುವಂತೆ ಸೂಚಿಸಬೇಕು ಎಂದು ಇ.ಒ.ಅವರಿಗೆ ಶಾಸಕರು ತಿಳಿಸಿದರು.

ಒಂದು ವಾರಗಳ ಕಾಲ ಇರುವ ಲಾಕ್‌ಡೌನ್ ಮಾರ್ಗಸೂಚಿಯನ್ನು ಜಿಲ್ಲಾಡಳಿತ ಪ್ರಕಟಿಸಲಿದ್ದು ಕಾನೂನು ಮೀರಿದರೆ ಅಂತವರ ಮೇಲೆ ಕಠಿಣ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಶಾಸಕರು ಸೂಚಿಸಿದರು. ಜನರ ಆರೋಗ್ಯದ ದೃಷ್ಠಿಯಿಂದ ಲಾಕ್‌ಡೌನ್ ನಿರ್ಧಾರವನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ. ಜನರು ಮನೆಯಿಂದ ಹೊರ ಬಾರದೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ವಿನಂತಿಸಿದರು.

ಸಭೆಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ನ.ಪಂ.ಸದಸ್ಯ ವಿನಯ ಕಂದಡ್ಕ, ತಹಶೀಲ್ದಾರ್ ಅನಂತಶAಕರ, ಪೊಲೀಸ್ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ನ.ಪಂ.ಮುಖ್ಯಾಧಿಕಾರಿ ಮತ್ತಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಆರ್.ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

5 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

10 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

22 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

23 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago