MIRROR FOCUS

ಲಿಚಿ ಒಂದು ರುಚಿಕರ ಹಣ್ಣು : “ಲಿಚಿ” ಹಣ್ಣಿನ ಮೇಲೆ ಕೋಪವೇಕೆ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲಿಚಿ ಹಣ್ಣು ಈಚೆಗೆ ಭಾರೀ ಸುದ್ದಿ ಮಾಡಿತು. ಬಿಹಾರದ ಮುಜಫ್ಫರಪುರದಲ್ಲಿ 3 ವಾರದಲ್ಲಿ ಸುಮಾರು 150 ಮಕ್ಕಳ ಸಾವಿಗೆ ಲಿಚಿ ಹಣ್ಣು ತಿಂದಿರುವುದು ಕಾರಣ ಇರಬಹುದೆಂದು ಎಂಬ ಸಂದೇಹವೊಂದು ಇಡೀ ಹಣ್ಣಿನ ಮೇಲೆ ಕೋಪವಾಯಿತು. ಲಿಚಿ ಹಣ್ಣೇ ಆಪತ್ತು ಎಂಬ ಚಿತ್ರಣ ಬಂತು. ಆ ಬಳಿಕ ವೈದ್ಯರೇ ಹೇಳಿದರೂ ಲಿಚಿ ಹಣ್ಣು ಕಾರಣವಲ್ಲ. ಆದರೆ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳು ಒಮ್ಮಲೇ ಈ ಹಣ್ಣು ತಿಂದರೆ ಸಮಸ್ಯೆಯಾಗಬಹುದು. ಈಗ ಕೇರಳ ಸೇರಿದಂರೆ ರಾಜ್ಯದಲ್ಲಿ  ಹರಡಿರುವುದು ಸುದ್ದಿ ಅದೇ ಮಾದರಿಯ ರಂಬುಟಾನ್ ಹಣ್ಣಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರುವ ತಂತ್ರವಷ್ಟೇ ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ.

Advertisement

ಚೀನಾದ ಗುವಾಂಗ್ಡಾಂಗ್ ಮತ್ತು ಫುಜಿಯನ್ ಪ್ರಾಂತ್ಯಗಳಿಗೆ ಸ್ಥಳೀಯವಾಗಿ ಉಷ್ಣವಲಯದ ಮರವಾಗಿರುವ ಲಿಚಿ ಭಾರತದಲ್ಲೂ ಉತ್ತಮ ಬೆಳೆಯಾಗಿ ಬೆಳೆಯುತ್ತದೆ. ಲಿಚಿಯು ಸಣ್ಣ ತಿರುಳಿರುವ ಹಣ್ಣುಗಳನ್ನು ಹೊಂದಿರುತ್ತದೆ. ಹಣ್ಣಿನ ಹೊರಭಾಗವು ಗುಲಾಬಿ-ಕೆಂಪು, ಒರಟಾದದು. ಅದನ್ನು ಒಡೆದು ಸಿಹಿಭಾಗವನ್ನು ತಿನ್ನುವ ಹಣ್ಣು ಅದು. ಭಾರತದಲ್ಲೂ ಈ ಹಣ್ಣಿಗೆ ಉತ್ತಮ ಬೇಡಿಕೆ ಹಾಗೂ ಮಾರುಕಟ್ಟೆಯೂ ಇದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಹೊಂದಿರುವ ಈ ಹಣ್ಣು ಚರ್ಮದ ರಕ್ಷಣೆ, ಮಕ್ಕಳ ಬೆಳವಣಿಗೆಗೆ ಸಹಕಾರಿ. ಸಿ ವಿಟಮಿನ್ ಹೇರಳವಾಗಿರುವ ಪ್ರತಿ 100 ಗ್ರಾಂ ಲಿಚಿಯಲ್ಲಿ 72 ಗ್ರಾಂ ವಿಟಮಿನ್ ‘ಸಿ’ ಇರುತ್ತದೆ.  ಬಿ ಕಾಂಪ್ಲೆಕ್ಸ್‌ನೊಂದಿಗೆ ನಾರಿನಂಶವನ್ನೂ ಹೊಂದಿರುವುದು ಈ ಹಣ್ಣಿನ ವಿಶೇಷ.

 

ಇತ್ತೀಚೆಗೆ  ಬಿಹಾರದ ಮುಜಫ್ಫರಪುರದಲ್ಲಿ  ಅನೇಕ ಮಕ್ಕಳು  ಸಾವನ್ನಪ್ಪಿದ್ದರು. ಇದಕ್ಕೆ ಕಾರಣ ಲಿಚಿ ಹಣ್ಣು ಎಂದು ಸುದ್ದಿ ಹರಡಲಾಯಿತು. ಈ ಹಣ್ಣನ್ನು ಮುಜಫ್ಫುರಪುರ ಪ್ರದೇಶದಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಅಲ್ಲಿನ ಮಕ್ಕಳು ಈ ಹಣ್ಣನ್ನು ಯಥೇಚ್ಛವಾಗಿ ತಿನ್ನುತ್ತಾರೆ. ಪೌಷ್ಟಿಕಾಂಶದ ಕೊರತೆ ಇರುವ ಮಕ್ಕಳು ಅತಿಯಾಗಿ ಈ ಹಣ್ಣು ಸೇವಿಸಿದರೆ ಅಪಾಯ ಎಂದು ವೈದ್ಯರು ಹೇಳುತ್ತಾರೆ. ಲಿಚಿ ಹಣ್ಣಿನಲ್ಲಿರುವ ಅ ಗ್ಲೂಕೋಸ್‌ ಅನ್ನು ಅತಿ ಕಡಿಮೆ ಸಮಯದಲ್ಲಿ ಹೀರಿಬಿಡುವ ಇದರ ಗುಣವು ಮೊದಲೇ ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿದ್ದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಈ ಹಣ್ಣುಗಳನ್ನು ತಿಂದಿದ್ದರಿಂದ ಅವರ ರಕ್ತದಲ್ಲಿ ಗ್ಲೂಕೋಸ್‌ ಪ್ರಮಾಣವು ತೀವ್ರ ಮಟ್ಟದಲ್ಲಿ ಕುಸಿದು, ಮೆದುಳಿನ ಉರಿಯೂತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹಾಗೆಂದು ಲಿಚಿಯೇ ಮಾರಕ ಅಲ್ಲ.

ಇದೊಂದೇ ಮಾಹಿತಿ ಇರಿಸಿಕೊಂಡು ಈಗ ಕೇರಳ ಹಾಗೂ ರಾಜ್ಯದ ವಿವಿಧ ಕಡೆ ಬೆಳೆಯುತ್ತಿರುವ ರಂಬುಟಾನ್ ಹಣ್ಣಿನ ಮೇಲೂ ಇದೀಗ ಅಪವಾದ ಮಾಡಲಾಗುತ್ತಿದೆ. ವಾಸ್ತವವಾಗಿ ರಂಬುಟಾನ್ ಬೇರೆ ಲಿಚಿ ಬೇರೆ. ಇದರ ಹಿಂದೆಯೂ ಲಾಬಿಗಳು ಕೆಲಸ ಮಾಡುತ್ತಿರುವ ಸಂಶಯ ವ್ಯಕ್ತವಾಗಿದೆ. ಇತ್ತೀಚೆಗೆ ಕೇರಳ ಹಾಗೂ ರಾಜ್ಯದ ಕೆಲವು ಕಡೆ ಹೇರಳವಾಗಿ ರಂಬುಟಾನ್ ಬೆಳೆಯಲಾಗುತ್ತಿದ್ದು ದೇಶದ ವಿವಿಧ ಕಡೆಗಳಿಗೆ ರವಾನೆಯಾಗುತ್ತಿದೆ. ಉತ್ತಮ ಮಾರುಕಟ್ಟೆಯೂ ಲಭ್ಯವಾಗುತ್ತಿದೆ. ಹೀಗಾಗಿ ಲಿಚಿ ಹೆಸರಲ್ಲಿ  ರಂಬುಟಾನ್ ಹಣ್ಣನ್ನು  ಹೊಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಬೆಳೆಗಾರರು ಸಂದೇಹ ವ್ಯಕ್ತಪಡಿಸುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

13 minutes ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

14 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

14 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

1 day ago