Advertisement
MIRROR FOCUS

ಲಿಚಿ ಒಂದು ರುಚಿಕರ ಹಣ್ಣು : “ಲಿಚಿ” ಹಣ್ಣಿನ ಮೇಲೆ ಕೋಪವೇಕೆ ?

Share

ಲಿಚಿ ಹಣ್ಣು ಈಚೆಗೆ ಭಾರೀ ಸುದ್ದಿ ಮಾಡಿತು. ಬಿಹಾರದ ಮುಜಫ್ಫರಪುರದಲ್ಲಿ 3 ವಾರದಲ್ಲಿ ಸುಮಾರು 150 ಮಕ್ಕಳ ಸಾವಿಗೆ ಲಿಚಿ ಹಣ್ಣು ತಿಂದಿರುವುದು ಕಾರಣ ಇರಬಹುದೆಂದು ಎಂಬ ಸಂದೇಹವೊಂದು ಇಡೀ ಹಣ್ಣಿನ ಮೇಲೆ ಕೋಪವಾಯಿತು. ಲಿಚಿ ಹಣ್ಣೇ ಆಪತ್ತು ಎಂಬ ಚಿತ್ರಣ ಬಂತು. ಆ ಬಳಿಕ ವೈದ್ಯರೇ ಹೇಳಿದರೂ ಲಿಚಿ ಹಣ್ಣು ಕಾರಣವಲ್ಲ. ಆದರೆ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳು ಒಮ್ಮಲೇ ಈ ಹಣ್ಣು ತಿಂದರೆ ಸಮಸ್ಯೆಯಾಗಬಹುದು. ಈಗ ಕೇರಳ ಸೇರಿದಂರೆ ರಾಜ್ಯದಲ್ಲಿ  ಹರಡಿರುವುದು ಸುದ್ದಿ ಅದೇ ಮಾದರಿಯ ರಂಬುಟಾನ್ ಹಣ್ಣಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರುವ ತಂತ್ರವಷ್ಟೇ ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ.

ಚೀನಾದ ಗುವಾಂಗ್ಡಾಂಗ್ ಮತ್ತು ಫುಜಿಯನ್ ಪ್ರಾಂತ್ಯಗಳಿಗೆ ಸ್ಥಳೀಯವಾಗಿ ಉಷ್ಣವಲಯದ ಮರವಾಗಿರುವ ಲಿಚಿ ಭಾರತದಲ್ಲೂ ಉತ್ತಮ ಬೆಳೆಯಾಗಿ ಬೆಳೆಯುತ್ತದೆ. ಲಿಚಿಯು ಸಣ್ಣ ತಿರುಳಿರುವ ಹಣ್ಣುಗಳನ್ನು ಹೊಂದಿರುತ್ತದೆ. ಹಣ್ಣಿನ ಹೊರಭಾಗವು ಗುಲಾಬಿ-ಕೆಂಪು, ಒರಟಾದದು. ಅದನ್ನು ಒಡೆದು ಸಿಹಿಭಾಗವನ್ನು ತಿನ್ನುವ ಹಣ್ಣು ಅದು. ಭಾರತದಲ್ಲೂ ಈ ಹಣ್ಣಿಗೆ ಉತ್ತಮ ಬೇಡಿಕೆ ಹಾಗೂ ಮಾರುಕಟ್ಟೆಯೂ ಇದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಹೊಂದಿರುವ ಈ ಹಣ್ಣು ಚರ್ಮದ ರಕ್ಷಣೆ, ಮಕ್ಕಳ ಬೆಳವಣಿಗೆಗೆ ಸಹಕಾರಿ. ಸಿ ವಿಟಮಿನ್ ಹೇರಳವಾಗಿರುವ ಪ್ರತಿ 100 ಗ್ರಾಂ ಲಿಚಿಯಲ್ಲಿ 72 ಗ್ರಾಂ ವಿಟಮಿನ್ ‘ಸಿ’ ಇರುತ್ತದೆ.  ಬಿ ಕಾಂಪ್ಲೆಕ್ಸ್‌ನೊಂದಿಗೆ ನಾರಿನಂಶವನ್ನೂ ಹೊಂದಿರುವುದು ಈ ಹಣ್ಣಿನ ವಿಶೇಷ.

 

ಇತ್ತೀಚೆಗೆ  ಬಿಹಾರದ ಮುಜಫ್ಫರಪುರದಲ್ಲಿ  ಅನೇಕ ಮಕ್ಕಳು  ಸಾವನ್ನಪ್ಪಿದ್ದರು. ಇದಕ್ಕೆ ಕಾರಣ ಲಿಚಿ ಹಣ್ಣು ಎಂದು ಸುದ್ದಿ ಹರಡಲಾಯಿತು. ಈ ಹಣ್ಣನ್ನು ಮುಜಫ್ಫುರಪುರ ಪ್ರದೇಶದಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಅಲ್ಲಿನ ಮಕ್ಕಳು ಈ ಹಣ್ಣನ್ನು ಯಥೇಚ್ಛವಾಗಿ ತಿನ್ನುತ್ತಾರೆ. ಪೌಷ್ಟಿಕಾಂಶದ ಕೊರತೆ ಇರುವ ಮಕ್ಕಳು ಅತಿಯಾಗಿ ಈ ಹಣ್ಣು ಸೇವಿಸಿದರೆ ಅಪಾಯ ಎಂದು ವೈದ್ಯರು ಹೇಳುತ್ತಾರೆ. ಲಿಚಿ ಹಣ್ಣಿನಲ್ಲಿರುವ ಅ ಗ್ಲೂಕೋಸ್‌ ಅನ್ನು ಅತಿ ಕಡಿಮೆ ಸಮಯದಲ್ಲಿ ಹೀರಿಬಿಡುವ ಇದರ ಗುಣವು ಮೊದಲೇ ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿದ್ದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಈ ಹಣ್ಣುಗಳನ್ನು ತಿಂದಿದ್ದರಿಂದ ಅವರ ರಕ್ತದಲ್ಲಿ ಗ್ಲೂಕೋಸ್‌ ಪ್ರಮಾಣವು ತೀವ್ರ ಮಟ್ಟದಲ್ಲಿ ಕುಸಿದು, ಮೆದುಳಿನ ಉರಿಯೂತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹಾಗೆಂದು ಲಿಚಿಯೇ ಮಾರಕ ಅಲ್ಲ.

ಇದೊಂದೇ ಮಾಹಿತಿ ಇರಿಸಿಕೊಂಡು ಈಗ ಕೇರಳ ಹಾಗೂ ರಾಜ್ಯದ ವಿವಿಧ ಕಡೆ ಬೆಳೆಯುತ್ತಿರುವ ರಂಬುಟಾನ್ ಹಣ್ಣಿನ ಮೇಲೂ ಇದೀಗ ಅಪವಾದ ಮಾಡಲಾಗುತ್ತಿದೆ. ವಾಸ್ತವವಾಗಿ ರಂಬುಟಾನ್ ಬೇರೆ ಲಿಚಿ ಬೇರೆ. ಇದರ ಹಿಂದೆಯೂ ಲಾಬಿಗಳು ಕೆಲಸ ಮಾಡುತ್ತಿರುವ ಸಂಶಯ ವ್ಯಕ್ತವಾಗಿದೆ. ಇತ್ತೀಚೆಗೆ ಕೇರಳ ಹಾಗೂ ರಾಜ್ಯದ ಕೆಲವು ಕಡೆ ಹೇರಳವಾಗಿ ರಂಬುಟಾನ್ ಬೆಳೆಯಲಾಗುತ್ತಿದ್ದು ದೇಶದ ವಿವಿಧ ಕಡೆಗಳಿಗೆ ರವಾನೆಯಾಗುತ್ತಿದೆ. ಉತ್ತಮ ಮಾರುಕಟ್ಟೆಯೂ ಲಭ್ಯವಾಗುತ್ತಿದೆ. ಹೀಗಾಗಿ ಲಿಚಿ ಹೆಸರಲ್ಲಿ  ರಂಬುಟಾನ್ ಹಣ್ಣನ್ನು  ಹೊಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಬೆಳೆಗಾರರು ಸಂದೇಹ ವ್ಯಕ್ತಪಡಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago