ಲಿಚಿ ಹಣ್ಣು ಈಚೆಗೆ ಭಾರೀ ಸುದ್ದಿ ಮಾಡಿತು. ಬಿಹಾರದ ಮುಜಫ್ಫರಪುರದಲ್ಲಿ 3 ವಾರದಲ್ಲಿ ಸುಮಾರು 150 ಮಕ್ಕಳ ಸಾವಿಗೆ ಲಿಚಿ ಹಣ್ಣು ತಿಂದಿರುವುದು ಕಾರಣ ಇರಬಹುದೆಂದು ಎಂಬ ಸಂದೇಹವೊಂದು ಇಡೀ ಹಣ್ಣಿನ ಮೇಲೆ ಕೋಪವಾಯಿತು. ಲಿಚಿ ಹಣ್ಣೇ ಆಪತ್ತು ಎಂಬ ಚಿತ್ರಣ ಬಂತು. ಆ ಬಳಿಕ ವೈದ್ಯರೇ ಹೇಳಿದರೂ ಲಿಚಿ ಹಣ್ಣು ಕಾರಣವಲ್ಲ. ಆದರೆ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳು ಒಮ್ಮಲೇ ಈ ಹಣ್ಣು ತಿಂದರೆ ಸಮಸ್ಯೆಯಾಗಬಹುದು. ಈಗ ಕೇರಳ ಸೇರಿದಂರೆ ರಾಜ್ಯದಲ್ಲಿ ಹರಡಿರುವುದು ಸುದ್ದಿ ಅದೇ ಮಾದರಿಯ ರಂಬುಟಾನ್ ಹಣ್ಣಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರುವ ತಂತ್ರವಷ್ಟೇ ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ.
ಚೀನಾದ ಗುವಾಂಗ್ಡಾಂಗ್ ಮತ್ತು ಫುಜಿಯನ್ ಪ್ರಾಂತ್ಯಗಳಿಗೆ ಸ್ಥಳೀಯವಾಗಿ ಉಷ್ಣವಲಯದ ಮರವಾಗಿರುವ ಲಿಚಿ ಭಾರತದಲ್ಲೂ ಉತ್ತಮ ಬೆಳೆಯಾಗಿ ಬೆಳೆಯುತ್ತದೆ. ಲಿಚಿಯು ಸಣ್ಣ ತಿರುಳಿರುವ ಹಣ್ಣುಗಳನ್ನು ಹೊಂದಿರುತ್ತದೆ. ಹಣ್ಣಿನ ಹೊರಭಾಗವು ಗುಲಾಬಿ-ಕೆಂಪು, ಒರಟಾದದು. ಅದನ್ನು ಒಡೆದು ಸಿಹಿಭಾಗವನ್ನು ತಿನ್ನುವ ಹಣ್ಣು ಅದು. ಭಾರತದಲ್ಲೂ ಈ ಹಣ್ಣಿಗೆ ಉತ್ತಮ ಬೇಡಿಕೆ ಹಾಗೂ ಮಾರುಕಟ್ಟೆಯೂ ಇದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಹೊಂದಿರುವ ಈ ಹಣ್ಣು ಚರ್ಮದ ರಕ್ಷಣೆ, ಮಕ್ಕಳ ಬೆಳವಣಿಗೆಗೆ ಸಹಕಾರಿ. ಸಿ ವಿಟಮಿನ್ ಹೇರಳವಾಗಿರುವ ಪ್ರತಿ 100 ಗ್ರಾಂ ಲಿಚಿಯಲ್ಲಿ 72 ಗ್ರಾಂ ವಿಟಮಿನ್ ‘ಸಿ’ ಇರುತ್ತದೆ. ಬಿ ಕಾಂಪ್ಲೆಕ್ಸ್ನೊಂದಿಗೆ ನಾರಿನಂಶವನ್ನೂ ಹೊಂದಿರುವುದು ಈ ಹಣ್ಣಿನ ವಿಶೇಷ.
ಇತ್ತೀಚೆಗೆ ಬಿಹಾರದ ಮುಜಫ್ಫರಪುರದಲ್ಲಿ ಅನೇಕ ಮಕ್ಕಳು ಸಾವನ್ನಪ್ಪಿದ್ದರು. ಇದಕ್ಕೆ ಕಾರಣ ಲಿಚಿ ಹಣ್ಣು ಎಂದು ಸುದ್ದಿ ಹರಡಲಾಯಿತು. ಈ ಹಣ್ಣನ್ನು ಮುಜಫ್ಫುರಪುರ ಪ್ರದೇಶದಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಅಲ್ಲಿನ ಮಕ್ಕಳು ಈ ಹಣ್ಣನ್ನು ಯಥೇಚ್ಛವಾಗಿ ತಿನ್ನುತ್ತಾರೆ. ಪೌಷ್ಟಿಕಾಂಶದ ಕೊರತೆ ಇರುವ ಮಕ್ಕಳು ಅತಿಯಾಗಿ ಈ ಹಣ್ಣು ಸೇವಿಸಿದರೆ ಅಪಾಯ ಎಂದು ವೈದ್ಯರು ಹೇಳುತ್ತಾರೆ. ಲಿಚಿ ಹಣ್ಣಿನಲ್ಲಿರುವ ಅ ಗ್ಲೂಕೋಸ್ ಅನ್ನು ಅತಿ ಕಡಿಮೆ ಸಮಯದಲ್ಲಿ ಹೀರಿಬಿಡುವ ಇದರ ಗುಣವು ಮೊದಲೇ ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿದ್ದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಈ ಹಣ್ಣುಗಳನ್ನು ತಿಂದಿದ್ದರಿಂದ ಅವರ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವು ತೀವ್ರ ಮಟ್ಟದಲ್ಲಿ ಕುಸಿದು, ಮೆದುಳಿನ ಉರಿಯೂತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹಾಗೆಂದು ಲಿಚಿಯೇ ಮಾರಕ ಅಲ್ಲ.
ಇದೊಂದೇ ಮಾಹಿತಿ ಇರಿಸಿಕೊಂಡು ಈಗ ಕೇರಳ ಹಾಗೂ ರಾಜ್ಯದ ವಿವಿಧ ಕಡೆ ಬೆಳೆಯುತ್ತಿರುವ ರಂಬುಟಾನ್ ಹಣ್ಣಿನ ಮೇಲೂ ಇದೀಗ ಅಪವಾದ ಮಾಡಲಾಗುತ್ತಿದೆ. ವಾಸ್ತವವಾಗಿ ರಂಬುಟಾನ್ ಬೇರೆ ಲಿಚಿ ಬೇರೆ. ಇದರ ಹಿಂದೆಯೂ ಲಾಬಿಗಳು ಕೆಲಸ ಮಾಡುತ್ತಿರುವ ಸಂಶಯ ವ್ಯಕ್ತವಾಗಿದೆ. ಇತ್ತೀಚೆಗೆ ಕೇರಳ ಹಾಗೂ ರಾಜ್ಯದ ಕೆಲವು ಕಡೆ ಹೇರಳವಾಗಿ ರಂಬುಟಾನ್ ಬೆಳೆಯಲಾಗುತ್ತಿದ್ದು ದೇಶದ ವಿವಿಧ ಕಡೆಗಳಿಗೆ ರವಾನೆಯಾಗುತ್ತಿದೆ. ಉತ್ತಮ ಮಾರುಕಟ್ಟೆಯೂ ಲಭ್ಯವಾಗುತ್ತಿದೆ. ಹೀಗಾಗಿ ಲಿಚಿ ಹೆಸರಲ್ಲಿ ರಂಬುಟಾನ್ ಹಣ್ಣನ್ನು ಹೊಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಬೆಳೆಗಾರರು ಸಂದೇಹ ವ್ಯಕ್ತಪಡಿಸುತ್ತಾರೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.