Advertisement
MIRROR FOCUS

ಲಿಚಿ ಒಂದು ರುಚಿಕರ ಹಣ್ಣು : “ಲಿಚಿ” ಹಣ್ಣಿನ ಮೇಲೆ ಕೋಪವೇಕೆ ?

Share

ಲಿಚಿ ಹಣ್ಣು ಈಚೆಗೆ ಭಾರೀ ಸುದ್ದಿ ಮಾಡಿತು. ಬಿಹಾರದ ಮುಜಫ್ಫರಪುರದಲ್ಲಿ 3 ವಾರದಲ್ಲಿ ಸುಮಾರು 150 ಮಕ್ಕಳ ಸಾವಿಗೆ ಲಿಚಿ ಹಣ್ಣು ತಿಂದಿರುವುದು ಕಾರಣ ಇರಬಹುದೆಂದು ಎಂಬ ಸಂದೇಹವೊಂದು ಇಡೀ ಹಣ್ಣಿನ ಮೇಲೆ ಕೋಪವಾಯಿತು. ಲಿಚಿ ಹಣ್ಣೇ ಆಪತ್ತು ಎಂಬ ಚಿತ್ರಣ ಬಂತು. ಆ ಬಳಿಕ ವೈದ್ಯರೇ ಹೇಳಿದರೂ ಲಿಚಿ ಹಣ್ಣು ಕಾರಣವಲ್ಲ. ಆದರೆ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳು ಒಮ್ಮಲೇ ಈ ಹಣ್ಣು ತಿಂದರೆ ಸಮಸ್ಯೆಯಾಗಬಹುದು. ಈಗ ಕೇರಳ ಸೇರಿದಂರೆ ರಾಜ್ಯದಲ್ಲಿ  ಹರಡಿರುವುದು ಸುದ್ದಿ ಅದೇ ಮಾದರಿಯ ರಂಬುಟಾನ್ ಹಣ್ಣಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರುವ ತಂತ್ರವಷ್ಟೇ ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ.

ಚೀನಾದ ಗುವಾಂಗ್ಡಾಂಗ್ ಮತ್ತು ಫುಜಿಯನ್ ಪ್ರಾಂತ್ಯಗಳಿಗೆ ಸ್ಥಳೀಯವಾಗಿ ಉಷ್ಣವಲಯದ ಮರವಾಗಿರುವ ಲಿಚಿ ಭಾರತದಲ್ಲೂ ಉತ್ತಮ ಬೆಳೆಯಾಗಿ ಬೆಳೆಯುತ್ತದೆ. ಲಿಚಿಯು ಸಣ್ಣ ತಿರುಳಿರುವ ಹಣ್ಣುಗಳನ್ನು ಹೊಂದಿರುತ್ತದೆ. ಹಣ್ಣಿನ ಹೊರಭಾಗವು ಗುಲಾಬಿ-ಕೆಂಪು, ಒರಟಾದದು. ಅದನ್ನು ಒಡೆದು ಸಿಹಿಭಾಗವನ್ನು ತಿನ್ನುವ ಹಣ್ಣು ಅದು. ಭಾರತದಲ್ಲೂ ಈ ಹಣ್ಣಿಗೆ ಉತ್ತಮ ಬೇಡಿಕೆ ಹಾಗೂ ಮಾರುಕಟ್ಟೆಯೂ ಇದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಹೊಂದಿರುವ ಈ ಹಣ್ಣು ಚರ್ಮದ ರಕ್ಷಣೆ, ಮಕ್ಕಳ ಬೆಳವಣಿಗೆಗೆ ಸಹಕಾರಿ. ಸಿ ವಿಟಮಿನ್ ಹೇರಳವಾಗಿರುವ ಪ್ರತಿ 100 ಗ್ರಾಂ ಲಿಚಿಯಲ್ಲಿ 72 ಗ್ರಾಂ ವಿಟಮಿನ್ ‘ಸಿ’ ಇರುತ್ತದೆ.  ಬಿ ಕಾಂಪ್ಲೆಕ್ಸ್‌ನೊಂದಿಗೆ ನಾರಿನಂಶವನ್ನೂ ಹೊಂದಿರುವುದು ಈ ಹಣ್ಣಿನ ವಿಶೇಷ.

 

ಇತ್ತೀಚೆಗೆ  ಬಿಹಾರದ ಮುಜಫ್ಫರಪುರದಲ್ಲಿ  ಅನೇಕ ಮಕ್ಕಳು  ಸಾವನ್ನಪ್ಪಿದ್ದರು. ಇದಕ್ಕೆ ಕಾರಣ ಲಿಚಿ ಹಣ್ಣು ಎಂದು ಸುದ್ದಿ ಹರಡಲಾಯಿತು. ಈ ಹಣ್ಣನ್ನು ಮುಜಫ್ಫುರಪುರ ಪ್ರದೇಶದಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಅಲ್ಲಿನ ಮಕ್ಕಳು ಈ ಹಣ್ಣನ್ನು ಯಥೇಚ್ಛವಾಗಿ ತಿನ್ನುತ್ತಾರೆ. ಪೌಷ್ಟಿಕಾಂಶದ ಕೊರತೆ ಇರುವ ಮಕ್ಕಳು ಅತಿಯಾಗಿ ಈ ಹಣ್ಣು ಸೇವಿಸಿದರೆ ಅಪಾಯ ಎಂದು ವೈದ್ಯರು ಹೇಳುತ್ತಾರೆ. ಲಿಚಿ ಹಣ್ಣಿನಲ್ಲಿರುವ ಅ ಗ್ಲೂಕೋಸ್‌ ಅನ್ನು ಅತಿ ಕಡಿಮೆ ಸಮಯದಲ್ಲಿ ಹೀರಿಬಿಡುವ ಇದರ ಗುಣವು ಮೊದಲೇ ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿದ್ದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಈ ಹಣ್ಣುಗಳನ್ನು ತಿಂದಿದ್ದರಿಂದ ಅವರ ರಕ್ತದಲ್ಲಿ ಗ್ಲೂಕೋಸ್‌ ಪ್ರಮಾಣವು ತೀವ್ರ ಮಟ್ಟದಲ್ಲಿ ಕುಸಿದು, ಮೆದುಳಿನ ಉರಿಯೂತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹಾಗೆಂದು ಲಿಚಿಯೇ ಮಾರಕ ಅಲ್ಲ.

ಇದೊಂದೇ ಮಾಹಿತಿ ಇರಿಸಿಕೊಂಡು ಈಗ ಕೇರಳ ಹಾಗೂ ರಾಜ್ಯದ ವಿವಿಧ ಕಡೆ ಬೆಳೆಯುತ್ತಿರುವ ರಂಬುಟಾನ್ ಹಣ್ಣಿನ ಮೇಲೂ ಇದೀಗ ಅಪವಾದ ಮಾಡಲಾಗುತ್ತಿದೆ. ವಾಸ್ತವವಾಗಿ ರಂಬುಟಾನ್ ಬೇರೆ ಲಿಚಿ ಬೇರೆ. ಇದರ ಹಿಂದೆಯೂ ಲಾಬಿಗಳು ಕೆಲಸ ಮಾಡುತ್ತಿರುವ ಸಂಶಯ ವ್ಯಕ್ತವಾಗಿದೆ. ಇತ್ತೀಚೆಗೆ ಕೇರಳ ಹಾಗೂ ರಾಜ್ಯದ ಕೆಲವು ಕಡೆ ಹೇರಳವಾಗಿ ರಂಬುಟಾನ್ ಬೆಳೆಯಲಾಗುತ್ತಿದ್ದು ದೇಶದ ವಿವಿಧ ಕಡೆಗಳಿಗೆ ರವಾನೆಯಾಗುತ್ತಿದೆ. ಉತ್ತಮ ಮಾರುಕಟ್ಟೆಯೂ ಲಭ್ಯವಾಗುತ್ತಿದೆ. ಹೀಗಾಗಿ ಲಿಚಿ ಹೆಸರಲ್ಲಿ  ರಂಬುಟಾನ್ ಹಣ್ಣನ್ನು  ಹೊಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಬೆಳೆಗಾರರು ಸಂದೇಹ ವ್ಯಕ್ತಪಡಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

3 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

4 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

15 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

15 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

20 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

21 hours ago